ಬ್ರೇಕಿಂಗ್ ನ್ಯೂಸ್
20-01-24 10:38 pm Udupi Correspondent ಕರಾವಳಿ
ಉಡುಪಿ, ಜ.20: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ತನ್ನ ಮೂಲ ಮನೆಯಲ್ಲಿ ದೈವದ ಕೋಲದಲ್ಲಿ ಭಾಗಿಯಾಗಿದ್ದು ಈ ವೇಳೆ ಸ್ವತಃ ದೈವದ ಮುಖವಾಡವನ್ನು ಹೊತ್ತು ದೈವದ ಕೆಲಸ ಮಾಡಿದ್ದಾರೆ. ಕುಟುಂಬದ ಮೂಲ ಮನೆಯಲ್ಲಿ ನಡೆದ ದೈವದ ಉತ್ಸವದಲ್ಲಿ ಸ್ವತಃ ತಾವೇ ನಿಂತು ದೈವದ ಮುಖವಾಡವನ್ನು ಹೊತ್ತು ಸೇವೆ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ ನಟನಾಗಿ ಹೆಸರು ಮಾಡಿದ್ದರೂ ತುಳುನಾಡಿನ ದೈವಗಳ ಕಾರಣಿಕ ಅರಿತು ಸೇವೆಯನ್ನು ತಪ್ಪಿಸಿಲ್ಲ. ಉಡುಪಿ ಜಿಲ್ಲೆಯ ಅಲೆವೂರು ದೊಡ್ಡ ಮನೆ ಇವರ ಮೂಲಮನೆಯಾಗಿದ್ದು ಸದ್ಯ ದೈವಗಳ ಆರಾಧನೆ ನಡೆಯುತ್ತಿದೆ. ಗುತ್ತಿನ ಮನೆಯ ಪ್ರತಿಯೊಬ್ಬರಿಗೂ ಈ ಆಚರಣೆಯಲ್ಲಿ ಜವಾಬ್ದಾರಿಗಳಿರುತ್ತವೆ. ತುಳುನಾಡಿನಲ್ಲಿ ಮಾತೃ ಪ್ರಧಾನ ವ್ಯವಸ್ಥೆ ಇದ್ದರೂ, ರಕ್ಷಿತ್ ಶೆಟ್ಟಿ ತನ್ನ ತಂದೆಯ ಮನೆಯ ದೈವದ ಚಾಕರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ದೈವದ ಮನೆಯಲ್ಲಿ ಪ್ರತಿಷ್ಠಾಪನೆಯ ವೇಳೆ ಮುಖವಾಡವನ್ನು ತಾನೇ ಕೈಯಾರೆ ಹಿಡಿದು ಸೇವೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ವಿವಿಧ ಪೂಜೆಗಳು ನಡೆಯುತ್ತಿದ್ದು ಪ್ರತಿ ಕೆಲಸದಲ್ಲೂ ಹಾಜರಿದ್ದು ಮನೆ ಮಗನ ಕರ್ತವ್ಯ ನಿಭಾಯಿಸಿದ್ದಾರೆ.




ರಕ್ಷಿತ್ ಶೆಟ್ಟಿಯ ತಂದೆ ಶ್ರೀಧರ ಶೆಟ್ಟಿ ಅವರು ಈ ದೊಡ್ಡ ಮನೆ ಕುಟುಂಬಕ್ಕೆ ಸೇರಿದವರು. ಸುಮಾರು ಏಳು ಶತಮಾನಗಳ ಇತಿಹಾಸ ಇರುವ ಈ ಗುತ್ತಿನ ಮನೆಯಲ್ಲಿ ಪಂಜುರ್ಲಿ, ಧೂಮಾವತಿ ಸೇರಿದಂತೆ ಅನೇಕ ದೈವಗಳು ಇವೆ. ವರ್ಷಂಪ್ರತಿ ಇಲ್ಲಿ ದೈವಗಳ ಉತ್ಸವ ನಡೆಯುತ್ತದೆ. ಈಗ ದೈವದ ಗುಡಿ ಮತ್ತು ಗುತ್ತಿನ ಮನೆ ಜೀರ್ಣಾವಸ್ಥೆ ತಲುಪಿದ ಕಾರಣ ಕುಟುಂಬಿಕರೆಲ್ಲ ಸೇರಿ ನೂತನ ಕಟ್ಟಡ ನಿರ್ಮಿಸಿದ್ದಾರೆ.
ಮೂಲ ಮನೆಯಲ್ಲೀಗ ದೈವಗಳ ಕೋಲ ನಡೆಯುತ್ತಿದ್ದು ಹೆತ್ತವರ ಜೊತೆಗೆ ಮನೆ ಮಗನಾಗಿ ರಕ್ಷಿತ್ ಶೆಟ್ಟಿ ದೈವದ ಕೈಂಕರ್ಯ ನಡೆಸಿದ್ದಾರೆ.
Sandalwood actor Rakshit Shetty, who participated in the deity's kola at his original home, performed the divine work by carrying the mask of the deity himself. He stood by himself at the deity's festival held at the family's original home and served with the mask of the deity.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm