ಬ್ರೇಕಿಂಗ್ ನ್ಯೂಸ್
23-01-24 05:20 pm Mangalore Correspondent ಕರಾವಳಿ
ಉಳ್ಳಾಲ, ಜ.23: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹತ್ತು ಹಾಸಿಗೆಗಳ ಸುಸಜ್ಜಿತ ಡಯಾಲಿಸಿಸ್ ಘಟಕ ನಿರ್ಮಾಣಗೊಳ್ಳುತ್ತಿದ್ದು ನೂತನ ಘಟಕದ ಕಾಮಗಾರಿಯನ್ನು ಕ್ಷೇತ್ರದ ಶಾಸಕರೂ ವಿಧಾನಸಭಾ ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕೇಂದ್ರದಿಂದ 8 ಕಿ.ಮೀ ಅಂತರದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳು ರಾಜ್ಯ ಅಥವಾ ರಾಷ್ಟ್ರದಲ್ಲೇ ಕಾಣಲು ಸಿಗೋದಿಲ್ಲ. ಹಾಗಾಗಿ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರವು ರಾಷ್ಟ್ರಕ್ಕೆ ಮಾದರಿಯಾಗಿದೆ. ನಾನು ರಾಜ್ಯದ ಆರೋಗ್ಯ ಸಚಿವನಾಗಿದ್ದಾಗ ಕ್ಯಾಬಿನೆಟ್ಟಲ್ಲಿ ಅವಕಾಶ ಇಲ್ಲದಿದ್ದರೂ ಕೇಂದ್ರದ ವಿಶೇಷ ಅನುಮತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆಯನ್ನ ಕಟ್ಟಿಸಿದ್ದೆ. ಎಷ್ಟೇ ಉತ್ತಮ ಕಟ್ಟಡ ಮತ್ತು ಸೌಕರ್ಯ ಒದಗಿಸಿದರೂ ವೈದ್ಯರು, ಸಿಬ್ಬಂದಿ ಕೊರತೆಯಿಂದ ಆರೋಗ್ಯ ಕೇಂದ್ರದ ಸೇವೆಗಳಲ್ಲಿ ಕುಂಠಿತ ಕಂಡಿವೆ. ಕೆಲವೊಂದು ಉತ್ತಮ ಡಾಕ್ಟರ್ ಗಳು ಸ್ಥಳೀಯರ ಟೀಕೆ, ಟಿಪ್ಪಣಿಗಳಿಂದ ಕೆಲಸವೇ ಬೇಡವೆಂದು ಬಿಟ್ಟು ಹೋಗಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಯೆನಪೋಯ ಆಸ್ಪತ್ರೆ ಮತ್ತು ಸರಕಾರಿ ವೈದ್ಯರೂ ಜನರಿಗೆ ಉಚಿತ ಆರೋಗ್ಯ ಸೇವೆಯನ್ನ ನೀಡುತ್ತಿದ್ದಾರೆ.




ನನ್ನ ಶಾಸಕ ನಿಧಿಯಿಂದ ನೂತನ ಡಯಾಲಿಸಿಸ್ ಸೆಂಟರ್ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ದಾನಿಗಳ ನೆರವಿನಿಂದ ಅತಿ ಶೀಘ್ರವೇ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಿ ಘಟಕವನ್ನ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು. ಕೋವಿಡ್ ಸಮಯದಲ್ಲಿ ನನೆಗುದಿಗೆ ಬಿದ್ದಿದ್ದ ಆಕ್ಸಿಜನ್ ಘಟಕವನ್ನೂ ಉಪಯೋಗಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆಸ್ಪತ್ರೆ ಆವರಣದಲ್ಲಿರುವ ಶವಾಗಾರವನ್ನೂ ಸಾರ್ವಜನಿಕರು ಬಳಸುವಂತೆ ನವೀಕರಿಸುತ್ತಿರುವುದಾಗಿ ಖಾದರ್ ಹೇಳಿದರು.
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದೊಳಗೆ ಆಯುಷ್, ಯುನಾನಿ, ಆಯುರ್ವೇದ, ಆಲೋಪತಿ, ಹೋಮಿಯೋಪಥಿಕ್, ಡೆಂಟಲ್ ಸರ್ವೀಸ್, ಯೋಗ, ಡಯಾಲಿಸಿಸ್ ಹೀಗೆ ಎಲ್ಲಾ ಸೇವೆಗಳೂ ಸಾರ್ವಜನಿಕರಿಗೆ ಲಭಿಸಲಿದೆ ಎಂದು ಖಾದರ್ ಹೇಳಿದರು.
Mangalore Ullal community health centre inspected by Speaker UT Khader. 10 beds to have special dialysis units for treatment.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm