ಬ್ರೇಕಿಂಗ್ ನ್ಯೂಸ್
23-01-24 05:20 pm Mangalore Correspondent ಕರಾವಳಿ
ಉಳ್ಳಾಲ, ಜ.23: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹತ್ತು ಹಾಸಿಗೆಗಳ ಸುಸಜ್ಜಿತ ಡಯಾಲಿಸಿಸ್ ಘಟಕ ನಿರ್ಮಾಣಗೊಳ್ಳುತ್ತಿದ್ದು ನೂತನ ಘಟಕದ ಕಾಮಗಾರಿಯನ್ನು ಕ್ಷೇತ್ರದ ಶಾಸಕರೂ ವಿಧಾನಸಭಾ ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕೇಂದ್ರದಿಂದ 8 ಕಿ.ಮೀ ಅಂತರದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳು ರಾಜ್ಯ ಅಥವಾ ರಾಷ್ಟ್ರದಲ್ಲೇ ಕಾಣಲು ಸಿಗೋದಿಲ್ಲ. ಹಾಗಾಗಿ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರವು ರಾಷ್ಟ್ರಕ್ಕೆ ಮಾದರಿಯಾಗಿದೆ. ನಾನು ರಾಜ್ಯದ ಆರೋಗ್ಯ ಸಚಿವನಾಗಿದ್ದಾಗ ಕ್ಯಾಬಿನೆಟ್ಟಲ್ಲಿ ಅವಕಾಶ ಇಲ್ಲದಿದ್ದರೂ ಕೇಂದ್ರದ ವಿಶೇಷ ಅನುಮತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆಯನ್ನ ಕಟ್ಟಿಸಿದ್ದೆ. ಎಷ್ಟೇ ಉತ್ತಮ ಕಟ್ಟಡ ಮತ್ತು ಸೌಕರ್ಯ ಒದಗಿಸಿದರೂ ವೈದ್ಯರು, ಸಿಬ್ಬಂದಿ ಕೊರತೆಯಿಂದ ಆರೋಗ್ಯ ಕೇಂದ್ರದ ಸೇವೆಗಳಲ್ಲಿ ಕುಂಠಿತ ಕಂಡಿವೆ. ಕೆಲವೊಂದು ಉತ್ತಮ ಡಾಕ್ಟರ್ ಗಳು ಸ್ಥಳೀಯರ ಟೀಕೆ, ಟಿಪ್ಪಣಿಗಳಿಂದ ಕೆಲಸವೇ ಬೇಡವೆಂದು ಬಿಟ್ಟು ಹೋಗಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಯೆನಪೋಯ ಆಸ್ಪತ್ರೆ ಮತ್ತು ಸರಕಾರಿ ವೈದ್ಯರೂ ಜನರಿಗೆ ಉಚಿತ ಆರೋಗ್ಯ ಸೇವೆಯನ್ನ ನೀಡುತ್ತಿದ್ದಾರೆ.




ನನ್ನ ಶಾಸಕ ನಿಧಿಯಿಂದ ನೂತನ ಡಯಾಲಿಸಿಸ್ ಸೆಂಟರ್ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ದಾನಿಗಳ ನೆರವಿನಿಂದ ಅತಿ ಶೀಘ್ರವೇ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸಿ ಘಟಕವನ್ನ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು. ಕೋವಿಡ್ ಸಮಯದಲ್ಲಿ ನನೆಗುದಿಗೆ ಬಿದ್ದಿದ್ದ ಆಕ್ಸಿಜನ್ ಘಟಕವನ್ನೂ ಉಪಯೋಗಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆಸ್ಪತ್ರೆ ಆವರಣದಲ್ಲಿರುವ ಶವಾಗಾರವನ್ನೂ ಸಾರ್ವಜನಿಕರು ಬಳಸುವಂತೆ ನವೀಕರಿಸುತ್ತಿರುವುದಾಗಿ ಖಾದರ್ ಹೇಳಿದರು.
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದೊಳಗೆ ಆಯುಷ್, ಯುನಾನಿ, ಆಯುರ್ವೇದ, ಆಲೋಪತಿ, ಹೋಮಿಯೋಪಥಿಕ್, ಡೆಂಟಲ್ ಸರ್ವೀಸ್, ಯೋಗ, ಡಯಾಲಿಸಿಸ್ ಹೀಗೆ ಎಲ್ಲಾ ಸೇವೆಗಳೂ ಸಾರ್ವಜನಿಕರಿಗೆ ಲಭಿಸಲಿದೆ ಎಂದು ಖಾದರ್ ಹೇಳಿದರು.
Mangalore Ullal community health centre inspected by Speaker UT Khader. 10 beds to have special dialysis units for treatment.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm