ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm