ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm