ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm