ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm