ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm