ಬ್ರೇಕಿಂಗ್ ನ್ಯೂಸ್
24-01-24 06:03 pm Mangalore Correspondent ಕರಾವಳಿ
ಮಂಗಳೂರು, ಜ.24: ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಎಆರ್/ಡಿಎಆರ್) ಖಾಲಿ ಇರುವ (ಪುರುಷ & ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಇದೇ ಜ. 28ರಂದು ಭಾನುವಾರ ಬೆಳಗ್ಗೆ 11ರಿಂದ 12:30 ಗಂಟೆಯ ವರೆಗೆ ನಡೆಸಲಾಗುತ್ತಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯಲ್ಲಿ 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿರುತ್ತವೆ. ಪರೀಕ್ಷೆಗೆ ಸುಮಾರು 17000 ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆ ಇರುತ್ತದೆ.
ಅಭ್ಯರ್ಥಿಗಳಿಗೆ ಸಾಮಾನ್ಯ ಸೂಚನೆಗಳು:
1. ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಟ 120 ನಿಮಿಷಗಳ ಮುಂಚೆ ಅಂದರೆ ಬೆಳಗ್ಗೆ 9 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರತಕ್ಕದ್ದು.
2. ಅಭ್ಯರ್ಥಿಗಳು ಯಾವುದೇ ಇಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್ಗಳು, ಬ್ಲೂಟೂತ್ ಉಪಕರಣಗಳು, ಪೇಪರ್ ತುಂಡು, ಪುಸ್ತಕಗಳು, ನೋಟ್ಗಳು ಇತ್ಯಾದಿ ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗತಕ್ಕದ್ದಲ್ಲ.
3. ಅಭ್ಯರ್ಥಿಗಳನ್ನು ಅವರವರ ಪ್ರವೇಶ ಪತ್ರದೊಂದಿಗೆ ಯಾವುದಾದರೂ ಗುರುತಿನ ಚೀಟಿ ಉದಾ: ಚಾಲನಾ ಅನುಜ್ಞಾ ಪತ್ರ, ಪಾಸ್ಪೋಟ್/ಆಧಾರ್ ಕಾರ್ಡ್/ಪಾನ್ ಕಾರ್ಡ್/ಓಟರ್ ಐಡಿ(EPIC) ಗಳನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುವುದು.
4. ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಪುರುಷ ಮತ್ತು ತೃತಿಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ಸ್ಗಳು ಇರುವ ಶರ್ಟ್ಗಳನ್ನು ಧರಿಸತಕ್ಕದ್ದಲ್ಲ.
5. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸತಕ್ಕದ್ದಲ್ಲ.
6. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
7. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇದಿಸಿದೆ. ಇಂತಹ ಬೆಲೆಬಾಳುವ ವಸ್ತುಗಳ ಭದ್ರತೆ ವ್ಯವಸ್ಥೆ ಪರೀಕ್ಷಾ ಕೇಂದ್ರದಲ್ಲಿ ಇರುವುದಿಲ್ಲ. ಆದುದರಿಂದ ಅಭ್ಯರ್ಥಿಗಳು ತಮ್ಮ ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಯೇ ಬಿಟ್ಟುಬರಲು ಸೂಚಿಸಿದೆ.
The written examination for 3064 vacancies (male & third gender male) in the Armed Reserve Police Force (CAR/DAR) will be conducted on Sunday, January 28 from 11 am to 12.30 am and will be held at eight examination centres at Moodabidri under Mangaluru City Police Commissionerate. Around 17000 candidates are expected to appear for the exam.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm