ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm