ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.
ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm