ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.
ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm