ಬ್ರೇಕಿಂಗ್ ನ್ಯೂಸ್
26-01-24 05:00 pm Mangalore Correspondent ಕರಾವಳಿ
ಉಳ್ಳಾಲ, ಜ.26: ಚಿಕ್ಕಮ್ಮನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನ ಸಂಬಂಧಿಕರು, ಊರವರಿಗೆ ಹಂಚಿದ್ದ ವ್ಯಕ್ತಿಯೋರ್ವ ದಿಢೀರ್ ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಲ್ಲಾಪು ಬಳಿಯ ಪಾರ್ದೆ ಕಟ್ಟೆ ಎಂಬಲ್ಲಿ ನಡೆದಿದೆ.
ಮೂಲತಃ ನರಿಂಗಾನ ಗ್ರಾಮದ ಮೊಂಟೆಪದವಿನ ಮಠ ನಿವಾಸಿ ಸದ್ರಿ ಕಲ್ಲಾಪು ಪಾರ್ದೆ ಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ನಂದಕುಮಾರ್ (38) ಆತ್ಮಹತ್ಯೆಗೈದ ದುರ್ದೈವಿ.

ತಂದೆ, ತಾಯಿಯನ್ನ ಅಗಲಿದ್ದ ನಂದಕುಮಾರ್ ಅನಾಥರಾಗಿದ್ದು ಸಮಾರಂಭಗಳಿಗೆ ಲೈಟಿಂಗ್, ಮೈಕ್ ಅಳವಡಿಸುವ ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದರು. ಕಲ್ಲಾಪು ಪಾರ್ದೆಕಟ್ಟೆಯ ಡೆನ್ನಿಸ್ ಡಿಸೋಜ ಎಂಬವರ ಮನೆಯ ಮಹಡಿಯ ಕೋಣೆಯೊಂದರಲ್ಲಿ ನಂದಕುಮಾರ್ ಕಳೆದ ಎಂಟು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.
ಡೆನ್ನಿಸ್ ಡಿ ಸೋಜಾ ಅವರ ಕುಟುಂಬವು ಮಂಗಳೂರು ನಗರದಲ್ಲಿ ವಾಸಿಸುತ್ತಿದ್ದು ಇಂದು ಯಾರದೋ ಸಾವಿನ ಅಂತ್ಯ ಕ್ರಿಯೆಗೆ ಬಂದಿದ್ದ ಡೆನ್ನಿಸ್ ಅವರು ಮಧ್ಯಾಹ್ನ ಮನೆಯ ಮಹಡಿಯ ಬಾಗಿಲು ತೆರೆದು ನೋಡಿದಾಗ ನಂದ ಕುಮಾರ್ ಕೊಠಡಿಯ ಛಾವಣಿಯ ಕಬ್ಬಿಣದ ಸಲಾಕೆಗೆ ಕೇಸರಿ ಶಾಲಿನಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಉಳ್ಳಾಲದಾದ್ಯಂತ ಮಂದಿರ, ಮಸೀದಿಗಳಿಗೆ ವಿದ್ಯುತ್ ದೀಪಾಲಂಕಾರ, ಮೈಕ್ ಅಳವಡಿಸುವ ಕಾಯಕ ಮಾಡುತ್ತಿದ್ದ ನಂದಕುಮಾರ್ ಎಲ್ಲರಿಗೂ ಪರಿಚಿತರಾಗಿದ್ದು ಸದ್ಗುಣಶೀಲರಾಗಿದ್ದರು. ಚಿಕ್ಕಮ್ಮನ ಮಗಳಿಗೆ ಫೆಬ್ರವರಿ ತಿಂಗಳಲ್ಲಿ ಮದುವೆ ನಿಗದಿಯಾಗಿದ್ದು ಆಮಂತ್ರಣ ಪತ್ರಿಕೆಗಳನ್ನ ನಂದಕುಮಾರ್ ಅವರೇ ಸಂಬಂಧಿಕರು, ಸ್ನೇಹಿತರಿಗೆ ಹಂಚಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.
38 year old man commits suicide suddnely at Naringana Ullal in Mangalore. The deceased has been identified as Nandakumar. He was busy giving Marriage invitations of his sister to all the relatives and suddnely he has taken this extreme step.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm