Heart attack, Mangalore News: ಮಂಗಳೂರು ; ಗಣರಾಜ್ಯೋತ್ಸವ ಧ್ವಜಾರೋಹಣಗೈದ ಕೆಲ ಹೊತ್ತಲ್ಲೇ ಕುಸಿದು ಬಿದ್ದು ಮೃತ್ಯು 

26-01-24 11:12 pm       Mangalore Correspondent   ಕರಾವಳಿ

ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ  ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ನಡೆದಿದೆ. 

ಮಂಗಳೂರು, ಜ.26: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ  ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ನಡೆದಿದೆ. 

 ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಶುಕ್ರವಾರ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರಿಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು. 

ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣ ಹೋಗಿತ್ತು. ಮೂಲತಃ ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.

80 year old dies of heart attack after flag hosting at Bejai in Mangalore. The deceased has been identifed as Abdul Samad.