ಬ್ರೇಕಿಂಗ್ ನ್ಯೂಸ್
27-01-24 07:01 pm Mangalore Correspondent ಕರಾವಳಿ
ಮಂಗಳೂರು, ಜ.27: ದೈವ ನರ್ತನ ಮಾಡುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದ ಮಂಗಳೂರಿನ ಪ್ರಸಿದ್ಧ ದೈವ ನರ್ತಕರೊಬ್ಬರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ(47) ಸಾವನ್ನಪ್ಪಿದವರು.
ನಿನ್ನೆ ರಾತ್ರಿ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವದ ವಾರ್ಷಿಕ ಉತ್ಸವದಲ್ಲಿ ದೈವಕ್ಕೆ ಕಟ್ಟಿದ್ದ ಅಶೋಕ್ ಬಂಗೇರ ಅವರಿಗೆ ರಾತ್ರಿ 10.30ರ ವೇಳೆಗೆ ಸಣ್ಣಮಟ್ಟಿನ ಎದೆನೋವು ಕಾಣಿಸಿಕೊಂಡಿತ್ತು. ಹಾಗಾಗಿ, ದೈವದ ವೇಷ ಕಳಚಿಟ್ಟು ಅರ್ಧದಲ್ಲೇ ನಿಲ್ಲಿಸಿದ್ದರು. ನೇಮ ಕೊನೆಯ ಘಟ್ಟದಲ್ಲಿದ್ದಾಗ ಸುಸ್ತು ಉಂಟಾಗಿದ್ದರಿಂದ ಉತ್ಸವದ ಕೊನೆಯ ಘಟ್ಟವನ್ನು ತಮ್ಮ ನಿರ್ವಹಿಸುತ್ತಾನೆಂದು ಹೇಳಿ ತುರ್ತಾಗಿ ಅಶೋಕ್ ಬಂಗೇರ ಅಲ್ಲಿಂದ ತೆರಳಿದ್ದರು. ನೇರವಾಗಿ ಆಸ್ಪತ್ರೆಗೆ ತೆರಳುವ ಬದಲು ಬಂಗೇರ ಅವರು ಪದವಿನಂಗಡಿಯ ಮನೆಗೆ ಆಗಮಿಸಿ ರಾತ್ರಿ ಮಲಗಿದ್ದರು. ಶನಿವಾರ ಬೆಳಗ್ಗೆ ಐದು ಗಂಟೆಯ ವೇಳೆಗೆ ಮತ್ತೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಹಳೆಯಂಗಡಿ ಕೊಳುವೈಲು ರೆಂಜದಡಿ ಕುಟುಂಬಸ್ಥರ ದೈವಸ್ಥಾನದಲ್ಲಿ ನಿನ್ನೆ ರಾತ್ರಿ ರಕ್ತೇಶ್ವರಿ ದೈವದ ವಾರ್ಷಿಕ ಉತ್ಸವ ನಡೆದಿತ್ತು. ಅರ್ಧಕ್ಕೆ ನಿಲ್ಲಿಸಿದ್ದರಿಂದ ದೈವದ ಕೋಲವನ್ನು ಅಶೋಕ್ ಬಂಗೇರ ಅವರ ತಮ್ಮ ಪೂರ್ಣಗೊಳಿಸಿದ್ದರು. ಅಶೋಕ್ ಬಂಗೇರ ಅವರು ರಾಜನ್ ದೈವಗಳಿಗೆ ಕಟ್ಟುವವರಾಗಿದ್ದು ಮಂಗಳೂರಿನಲ್ಲಿ ಪ್ರಸಿದ್ಧಿ ಹೊಂದಿದ್ದಾರೆ. ಅಶೋಕ್ ಬಂಗೇರ ಅವರು ಪದವಿನಂಗಡಿ ಕೊರಗಜ್ಜ ಕ್ಷೇತ್ರದ ಪಾತ್ರಿಯಾಗಿದ್ದರು. ಇವರ ಸೋದರ ಭಾಸ್ಕರ ಬಂಗೇರ ಗಂಧಕಾಡುವಿನಲ್ಲಿ ಕೊರಗಜ್ಜ ಕ್ಷೇತ್ರ ನಡೆಸುತ್ತಿದ್ದಾರೆ.
#DaivaNartaka Ashok Bangera Dies While Performing due to #heartattack at Kola Haleyangadi in #Mangalore #BREAKINGNEWS pic.twitter.com/sH2GMuNsOj
— Headline Karnataka (@hknewsonline) January 27, 2024
Daiva Nartaka Ashok Bangera Dies While Performing due to heart attack at Kola Haleyangadi in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm