ಬ್ರೇಕಿಂಗ್ ನ್ಯೂಸ್
27-01-24 07:01 pm Mangalore Correspondent ಕರಾವಳಿ
ಮಂಗಳೂರು, ಜ.27: ದೈವ ನರ್ತನ ಮಾಡುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದ ಮಂಗಳೂರಿನ ಪ್ರಸಿದ್ಧ ದೈವ ನರ್ತಕರೊಬ್ಬರು ಆಸ್ಪತ್ರೆಗೆ ತೆರಳುವಷ್ಟರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ(47) ಸಾವನ್ನಪ್ಪಿದವರು.
ನಿನ್ನೆ ರಾತ್ರಿ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವದ ವಾರ್ಷಿಕ ಉತ್ಸವದಲ್ಲಿ ದೈವಕ್ಕೆ ಕಟ್ಟಿದ್ದ ಅಶೋಕ್ ಬಂಗೇರ ಅವರಿಗೆ ರಾತ್ರಿ 10.30ರ ವೇಳೆಗೆ ಸಣ್ಣಮಟ್ಟಿನ ಎದೆನೋವು ಕಾಣಿಸಿಕೊಂಡಿತ್ತು. ಹಾಗಾಗಿ, ದೈವದ ವೇಷ ಕಳಚಿಟ್ಟು ಅರ್ಧದಲ್ಲೇ ನಿಲ್ಲಿಸಿದ್ದರು. ನೇಮ ಕೊನೆಯ ಘಟ್ಟದಲ್ಲಿದ್ದಾಗ ಸುಸ್ತು ಉಂಟಾಗಿದ್ದರಿಂದ ಉತ್ಸವದ ಕೊನೆಯ ಘಟ್ಟವನ್ನು ತಮ್ಮ ನಿರ್ವಹಿಸುತ್ತಾನೆಂದು ಹೇಳಿ ತುರ್ತಾಗಿ ಅಶೋಕ್ ಬಂಗೇರ ಅಲ್ಲಿಂದ ತೆರಳಿದ್ದರು. ನೇರವಾಗಿ ಆಸ್ಪತ್ರೆಗೆ ತೆರಳುವ ಬದಲು ಬಂಗೇರ ಅವರು ಪದವಿನಂಗಡಿಯ ಮನೆಗೆ ಆಗಮಿಸಿ ರಾತ್ರಿ ಮಲಗಿದ್ದರು. ಶನಿವಾರ ಬೆಳಗ್ಗೆ ಐದು ಗಂಟೆಯ ವೇಳೆಗೆ ಮತ್ತೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಹಳೆಯಂಗಡಿ ಕೊಳುವೈಲು ರೆಂಜದಡಿ ಕುಟುಂಬಸ್ಥರ ದೈವಸ್ಥಾನದಲ್ಲಿ ನಿನ್ನೆ ರಾತ್ರಿ ರಕ್ತೇಶ್ವರಿ ದೈವದ ವಾರ್ಷಿಕ ಉತ್ಸವ ನಡೆದಿತ್ತು. ಅರ್ಧಕ್ಕೆ ನಿಲ್ಲಿಸಿದ್ದರಿಂದ ದೈವದ ಕೋಲವನ್ನು ಅಶೋಕ್ ಬಂಗೇರ ಅವರ ತಮ್ಮ ಪೂರ್ಣಗೊಳಿಸಿದ್ದರು. ಅಶೋಕ್ ಬಂಗೇರ ಅವರು ರಾಜನ್ ದೈವಗಳಿಗೆ ಕಟ್ಟುವವರಾಗಿದ್ದು ಮಂಗಳೂರಿನಲ್ಲಿ ಪ್ರಸಿದ್ಧಿ ಹೊಂದಿದ್ದಾರೆ. ಅಶೋಕ್ ಬಂಗೇರ ಅವರು ಪದವಿನಂಗಡಿ ಕೊರಗಜ್ಜ ಕ್ಷೇತ್ರದ ಪಾತ್ರಿಯಾಗಿದ್ದರು. ಇವರ ಸೋದರ ಭಾಸ್ಕರ ಬಂಗೇರ ಗಂಧಕಾಡುವಿನಲ್ಲಿ ಕೊರಗಜ್ಜ ಕ್ಷೇತ್ರ ನಡೆಸುತ್ತಿದ್ದಾರೆ.
#DaivaNartaka Ashok Bangera Dies While Performing due to #heartattack at Kola Haleyangadi in #Mangalore #BREAKINGNEWS pic.twitter.com/sH2GMuNsOj
— Headline Karnataka (@hknewsonline) January 27, 2024
Daiva Nartaka Ashok Bangera Dies While Performing due to heart attack at Kola Haleyangadi in Mangalore.
24-09-24 01:22 pm
Bangalore Correspondent
ಹೇಯ್ ನಾನ್ಯಾರು ಗೊತ್ತಾ ? ಡಿಸಿಪಿ ಮಗ ಕಣಲೇ, ನಾನು ಸ...
23-09-24 07:46 pm
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
24-09-24 10:28 am
Mangalore Correspondent
Doctor Drunk, ICU, Mangalore, Crime: ಮಂಗಳೂರಿನ...
22-09-24 04:55 pm
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm