ಬ್ರೇಕಿಂಗ್ ನ್ಯೂಸ್
27-01-24 10:50 pm Mangalore Correspondent ಕರಾವಳಿ
ಪುತ್ತೂರು, ಜ.27: ಕಾಂತಾರ ಚಿತ್ರದಲ್ಲಿ ಪಂಜುರ್ಲಿ ಪಾತ್ರಧಾರಿ ವ್ಯಕ್ತಿ ಕಾಲವಾದ ಬಳಿಕ ಆತನ ಮಗನೇ ದೈವದ ಸೇವೆಗೆ ನೇಮಕಗೊಳ್ಳುವ ಚಿತ್ರಣ ಇದೆ. ಅದೇ ರೀತಿಯಲ್ಲಿ ಕಡಬ ತಾಲೂಕಿನಲ್ಲಿ ಕಾರಣಿಕದ ದೈವ ಆಗಿರುವ ಶಿರಾಡಿ ದೈವದ ಸೇವೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಬಳಿಕ ಆ ವ್ಯಕ್ತಿಯ ಮಕ್ಕಳೇ ಮುಂದಿನ ಸೇವೆ ಮಾಡಬೇಕೆಂದು ನಿಶ್ಚಯಗೊಂಡ ಪ್ರಸಂಗ ನಡೆದಿದ್ದು ಕಾಂತಾರ ಚಿತ್ರವನ್ನು ನೆನಪಿಸಿದೆ.
ಕಳೆದ 2023ರ ಮಾರ್ಚ್ 30 ರಂದು ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವದ ವಾರ್ಷಿಕ ಜಾತ್ರೆ ನಡೆಯುತ್ತಿದ್ದಾಗ ಘಟನೆ ನಡೆದಿತ್ತು. ಉಳ್ಳಾಕುಲು ದೈವ ಹಾಗೂ ನಾಗಬ್ರಹ್ಮ ದೈವದ ನರ್ತನ ಸೇವೆ ನಡೆಯುತ್ತಿದ್ದಾಗ ಉಳ್ಳಾಕುಲು ದೈವದ ನರ್ತಕರಾಗಿದ್ದ ಎಡಮಂಗಲ ನಿವಾಸಿ 60 ವರ್ಷದ ಕಾಂತು ಅಜಿಲ ದೈವದ ನರ್ತನ ಮಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.


ದೈವ ನರ್ತಕ ಕಾಂತು ಅಜಿಲರ ಅಕಾಲಿಕ ಸಾವಿನ ಬಳಿಕ ಗ್ರಾಮದ ಜನ ದೈವದ ನರ್ತಕನ ಹುಡುಕಾಟದಲ್ಲಿ ತೊಡಗಿದ್ದರು. ದೈವಜ್ಞರ ಪ್ರಶ್ನಾ ಚಿಂತನೆ ನಡೆಸಿದಾಗ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್ ಅವರೇ ಮುಂದೆ ದೈವ ನರ್ತನದ ಜವಾಬ್ದಾರಿ ಹೊರಬೇಕು ಅಂತ ಕಂಡುಬಂದಿತ್ತು. ಬಳಿಕ, ಶಿರಾಡಿ ದೈವದ ಒಪ್ಪಿಗೆಯನ್ನೂ ಪಡೆಯಲಾಗಿತ್ತು. ಹೀಗಾಗಿ ಈ ವರ್ಷದ ಶಿರಾಡಿ ದೈವದ ನೇಮೋತ್ಸವಕ್ಕೂ ಮುನ್ನ ಇಬ್ಬರೂ ಯುವಕರನ್ನು ದೈವದ ಮುಂದೆ ನಿಲ್ಲಿಸಿ, ಇಬ್ಬರಿಗೂ ಯಾವ ರೀತಿಯಲ್ಲಿ ದೈವದ ಸೇವೆಯನ್ನು ಮಾಡಬೇಕು ಅನ್ನೋದನ್ನು ತಿಳಿಸುವ ಪ್ರಕ್ರಿಯ ನಡೆಸಲಾಗಿದೆ.
ದೈವ ನರ್ತಕರು ಶುದ್ಧವಾಗಿ ಮಡಿ ಬಟ್ಟೆಯನ್ನು ಸುತ್ತಿ ಮನೆ ಮಂದಿಯ ಹಾಗೂ ಗ್ರಾಮದ ಹಿರಿಯರ ಆಶೀರ್ವಾದ ಪಡೆದ ಬಳಿಕ ಒಂಬತ್ತು ದಿಕ್ಕಿಗೆ ಸೇರಿದ ಜನರ ಸಮ್ಮುಖದಲ್ಲಿ ದೀಕ್ಷೆ ಬೂಳ್ಯವನ್ನು ನೀಡಲಾಗುತ್ತದೆ. ದೈವ ನರ್ತಕನಿಗೆ ತನ್ನ ಸೇವೆ ಮಾಡುವಂತೆ ನೀಡುವ ಈ ದೀಕ್ಷೆ ದೈವಾರಾಧನೆಯಲ್ಲಿ ಅತ್ಯಂತ ಮಹತ್ವದ್ದಾಗಿದೆ. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ ಎನ್ನುವುದು ದೀಕ್ಷೆ ಬೂಳ್ಯದ ಹಿಂದಿರುವ ತತ್ವವಾಗಿದೆ.
ದೀಕ್ಷೆ ಪಡೆದ ಬಳಿಕ ದೈವ ನರ್ತಕ ನಾಲ್ಕು ಗ್ರಾಮಕ್ಕೆ ಸಂಬಂಧಪಟ್ಟ ದೈವಗಳ ಸೇವೆಯ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಳ್ಳುತ್ತಾನೆ. ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ಊರ ಹಾಗೂ ಪರವೂರಿನ ದೈವಭಕ್ತರು ಭಾಗವಹಿಸಿದ್ದರು. ಒಟ್ಟಿನಲ್ಲಿ ಕಾಂತಾರ ಸಿನಿಮಾದ ಕಥೆಯಂತೆ ತುಳುನಾಡಿನ ದೈವಾರಾಧನೆಯಲ್ಲೂ ದೈವೀ ಸ್ಪರ್ಶದ ಘಟನೆ ನಡೆದಿದ್ದು ಭಕ್ತರು ಅಚ್ಚರಿಗೀಡಾಗಿದ್ದಾರೆ.
After the death of a man who plays the role of Panjurli in the film 'Kantara', his son is appointed to serve the deity. Similarly, after a man who was serving the deity Shiradi in Kadaba taluk collapsed and died, it was decided that the man's children would do the next service.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am