Mangalore Venur blast, three killed: ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ 

28-01-24 09:12 pm       Mangalore Correspondent   ಕರಾವಳಿ

ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.

ಮಂಗಳೂರು, ಜ.28: ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.

ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68),  ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ. 

ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು.‌ ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 

ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.

Blast at Venur, Belthangady, Mangalore: ವೇಣೂರು ಬಳಿ ಪಟಾಕಿ ತಯಾರಿ ಘಟಕದಲ್ಲಿ ಭಾರೀ ಸ್ಫೋಟ ; ಮೂವರು ಕಾರ್ಮಿಕರು ಸಾವು 

Mangalore Venur blast, three killed, six injured, two of kerala killed. Sources report that the explosion occurred at a site engaged in the manufacturing of explosives, leading to the tragic loss of three lives.