ಬ್ರೇಕಿಂಗ್ ನ್ಯೂಸ್
29-01-24 05:03 pm Mangalore Correspondent ಕರಾವಳಿ
ಮಂಗಳೂರು, ಜ.29 : ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರೀಯ ಹಿಂದುಳಿದ ವರ್ಗದ ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಅವಕಾಶ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ರಾಜ್ಯದ ಜನಸಂಖ್ಯೆಯು 50 ಶೇ.ದಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಸೀಟು ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಸತ್ತಿನಲ್ಲಿ ಮೀನುಗಾರರ ಪ್ರತಿನಿಧಿಯನ್ನು ಇರುವುದು ಬಹಳ ಮುಖ್ಯವಾಗಿದೆ. ಪ್ರಮೋದ್ ಮಧ್ವರಾಜ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಗುರುತಿಸಿದ್ದಾರೆ. ನಾಡಿನ ಸಮಸ್ಯೆ ಬಗ್ಗೆ ತಿಳಿದಿರುವ ಇಂತಹ ವ್ಯಕ್ತಿಯೇ ನಮ್ಮ ಕರಾವಳಿಗೆ ಸಂಸದರಾಗಬೇಕು ಎಂದು ಮೀನುಗಾರ ಮುಖಂಡ ಮೋಹನ್ ಬೆಂಗ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಮೀನುಗಾರಿಕೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸುವುದು, ರಾಜ್ಯದ ಕಡಲ ಕಿನಾರೆ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಆಕರ್ಷಣೀಯ ಪ್ರವಾಸಿ ತಾಣಗಳನ್ನಾಗಿ
ಅಭಿವೃದ್ಧಿಪಡಿಸುವುದು, ಮಾಹಿತಿ ತಂತ್ರಜ್ಞಾನ ಕೇಂದ್ರ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದ್ದು ಪ್ರಮೋದ್ ಮಧ್ವರಾಜ್ ಸಂಸದರಾದಲ್ಲಿ ಮೀನುಗಾರ ಸಮಾಜ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದವರು ಹೇಳಿದರು. ಕಿಶೋರ್ ಸುವರ್ಣ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Bjp MP udupi chikmagaluru ticket to Pramod Madhwaraj must be given, high demand from fishing community.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm