ಬ್ರೇಕಿಂಗ್ ನ್ಯೂಸ್
29-01-24 05:03 pm Mangalore Correspondent ಕರಾವಳಿ
ಮಂಗಳೂರು, ಜ.29 : ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರೀಯ ಹಿಂದುಳಿದ ವರ್ಗದ ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಅವಕಾಶ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ರಾಜ್ಯದ ಜನಸಂಖ್ಯೆಯು 50 ಶೇ.ದಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಸೀಟು ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಸತ್ತಿನಲ್ಲಿ ಮೀನುಗಾರರ ಪ್ರತಿನಿಧಿಯನ್ನು ಇರುವುದು ಬಹಳ ಮುಖ್ಯವಾಗಿದೆ. ಪ್ರಮೋದ್ ಮಧ್ವರಾಜ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಗುರುತಿಸಿದ್ದಾರೆ. ನಾಡಿನ ಸಮಸ್ಯೆ ಬಗ್ಗೆ ತಿಳಿದಿರುವ ಇಂತಹ ವ್ಯಕ್ತಿಯೇ ನಮ್ಮ ಕರಾವಳಿಗೆ ಸಂಸದರಾಗಬೇಕು ಎಂದು ಮೀನುಗಾರ ಮುಖಂಡ ಮೋಹನ್ ಬೆಂಗ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಮೀನುಗಾರಿಕೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸುವುದು, ರಾಜ್ಯದ ಕಡಲ ಕಿನಾರೆ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಆಕರ್ಷಣೀಯ ಪ್ರವಾಸಿ ತಾಣಗಳನ್ನಾಗಿ
ಅಭಿವೃದ್ಧಿಪಡಿಸುವುದು, ಮಾಹಿತಿ ತಂತ್ರಜ್ಞಾನ ಕೇಂದ್ರ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದ್ದು ಪ್ರಮೋದ್ ಮಧ್ವರಾಜ್ ಸಂಸದರಾದಲ್ಲಿ ಮೀನುಗಾರ ಸಮಾಜ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದವರು ಹೇಳಿದರು. ಕಿಶೋರ್ ಸುವರ್ಣ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Bjp MP udupi chikmagaluru ticket to Pramod Madhwaraj must be given, high demand from fishing community.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm