ಬ್ರೇಕಿಂಗ್ ನ್ಯೂಸ್
30-01-24 08:17 pm Mangalore Correspondent ಕರಾವಳಿ
ಮಂಗಳೂರು, ಜ.30: ಕಾಶ್ಮೀರದಲ್ಲಿ ಲಾಲ್ ಚೌಕದಲ್ಲಿ ಧೈರ್ಯ ಇದ್ದವರು ರಾಷ್ಟ್ರ ಧ್ವಜ ಹಾರಿಸಿ ಎಂದಿದ್ದರು. ಆಗ ನಾವು ಬಿಜೆಪಿಯವರು ರಾಷ್ಟ್ರ ಧ್ವಜ ಹಾರಿಸಿದ್ದು, ಕಾಂಗ್ರೆಸಿನವರು ಎಲ್ಲಿದ್ದರು ? ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದು ಯಾರು? ಅಲ್ಲಿ ನಾವು ರಾಷ್ಟ್ರ ಧ್ವಜ ಹಾರಿಸಿದಾಗ ಲಾಠಿಚಾರ್ಜ್ ಮಾಡಿದ್ರಲ್ಲಾ ಕಾಂಗ್ರೆಸಿಗರು. ಇವರ ರಾಷ್ಟ್ರ ಧ್ವಜದ ಮೇಲಿನ ಪ್ರೇಮ ಆಗ ಎಲ್ಲಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರೇ 50 ರೂ.ನಂತೆ ಸಂಗ್ರಹಿಸಿ ಆರು ಲಕ್ಷ ವೆಚ್ಚದಲ್ಲಿ ಧ್ವಜಸ್ತಂಭ ಏರಿಸಿದ್ದರು. ತಿಂಗಳ ಕಾಲ ಧ್ವಜಸ್ತಂಭದ ಕೆಲಸ ಮಾಡಿದ್ದರು. ಆದರೆ ಅಲ್ಲಿ ರಾಮನ ಮಂದಿರದ ನೆನಪಲ್ಲಿ ಕೇಸರಿ ಬಣ್ಣದ ಹನುಮ ಧ್ವಜ ಏರಿಸಿದ್ದನ್ನು ಸಿದ್ದರಾಮಯ್ಯರಿಗೆ ಸಹಿಸಕ್ಕಾಗಿಲ್ಲ.
ಇವರಿಗೆ ಈಗ ರಾಷ್ಟ್ರ ಧ್ವಜದ ಮೇಲೆ ಅಭಿಮಾನ ಉಕ್ಕಿ ಹರಿದಿದೆ. ರಾಷ್ಟ್ರ ಧ್ವಜದ ಅಭಿಯಾನ ಮಾಡುತ್ತಾರಂತೆ. ಆದರೆ ರಾಷ್ಟ್ರ ಧ್ವಜದ ಪ್ರಶ್ನೆ ಬಂದಾಗ, ಇವರೆಲ್ಲ ಸುಮ್ಮನಿದ್ದರು ಎನ್ನೋದನ್ನು ನಾವು ಪ್ರಶ್ನೆ ಮಾಡಲೇಬೇಕು.
ಸಿದ್ದರಾಮಯ್ಯ ತನ್ನ ಹೆಸರಲ್ಲಿ ರಾಮ ಇದೆ ಅಂತಾರೆ. ಹೆಸರಲ್ಲಿ ರಾಮ ಇದ್ದರೇನು, ಹೃದಯದಲ್ಲಿ ಟಿಪ್ಪು ಟಿಪ್ಪು ಅಂತಿದ್ದೀರಲ್ಲಾ ನೀವು. ವೀರಪ್ಪನ್ ಹೆಸರಿನಲ್ಲಿ ವೀರ ಮತ್ತು ಅಪ್ಪ ಎಂಬ ಹೆಸರು ಇದ್ದಂತೆ. ವೀರಪ್ಪನ್ ಅಂದ್ರೆ ಡಕಾಯಿತರು, ಕಳ್ಳರಿಗೆಲ್ಲ ಲೀಡರ್ ಆಗಿದ್ದವ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಸಭೆ ಚುನಾವಣೆ ಗೆಲುವೇ ನಮ್ಮ ಗುರಿ. ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದರೆ ಈ ಸರ್ಕಾರ ಒಂದು ತಿಂಗಳು ಇರಲ್ಲ. ಅಲ್ಲಿದ್ದವರೇ ಈ ಸರ್ಕಾರ ಇರಬಾರದು ಅಂತ ಬಿಟ್ಟು ಬರ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕೊಡುವ ಉತ್ತರವೇ ಇವರಿಗೆ ಕೊನೆ ಮೊಳೆಯಾಗಲಿದೆ. ಅದಕ್ಕಾಗಿ ನಾವು ಸಜ್ಜಾಗಬೇಕಿದೆ ಎಂದು ಅಶೋಕ್ ಹೇಳಿದರು.
Mangalore R Ashok slams congress during Bjp Satish Kumpala being district president. He questioned which government was there during national flag being placed at Idgah maiden.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:08 pm
Mangalore Correspondent
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm