ಬ್ರೇಕಿಂಗ್ ನ್ಯೂಸ್
02-02-24 01:47 pm Mangalore Correspondent ಕರಾವಳಿ
ಉಳ್ಳಾಲ, ಫೆ.2: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ಟ್ರಾಲ್ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರ ಮಧ್ಯದಲ್ಲಿದ್ದ ಕಲ್ಲಿಗೆ ಬಡಿದು ಮುಳುಗಿದ್ದು, ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್ನ ಮೀನುಗಾರರು ಮುಳುಗುತ್ತಿದ್ದ ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ.
ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು ಬೋಟ್ಗೂ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ `ನವಾಮಿ - ಶಿವಾನಿ' ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್ನ ಮೀನುಗಾರರು ರಕ್ಷಿಸಿದ್ದಾರೆ.

ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್ನ ಪ್ರೊಪೆಲರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೆಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇ ಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ. ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ದುರ್ಗಾಲಕ್ಷ್ಮೀ ಮತ್ತು ಶ್ರೀ ಗೌರಿ ಬೋಟ್ನ ಮೀನುಗಾರರು ಮುಳುಗುತ್ತಿದ್ದವರನ್ನ ರಕ್ಷಿಸಿ, ಬೋಟನ್ನು ಸಮುದ್ರ ಕಿನಾರೆಗೆ ಎಳೆದೊಯ್ದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishing boat capsizes at ullal in Mangalore, five rescued
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm