ಬ್ರೇಕಿಂಗ್ ನ್ಯೂಸ್
02-02-24 08:40 pm Mangalore Correspondent ಕರಾವಳಿ
ಮಂಗಳೂರು, ಫೆ.2: ಗ್ಯಾನವಾಪಿ ಮಸೀದಿ ಮಾದರಿಯಲ್ಲೇ ಮಳಲಿ ಮಸೀದಿಯನ್ನು ಪ್ರಾಚ್ಯವಸ್ತು ಇಲಾಖೆಯಿಂದ ಉತ್ಖನನ ಮಾಡಿಸಬೇಕು ಎಂದು ಹೋರಾಟಕ್ಕೆ ಮುಂದಾಗಿದ್ದ ವಿಶ್ವ ಹಿಂದು ಪರಿಷತ್ ಒತ್ತಾಯಕ್ಕೆ ಬಲ ಬಂದಿದೆ. ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು, ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆ ನಡೆಸುವ ಅಧಿಕಾರ ಇಲ್ಲವೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
2022ರ ಎಪ್ರಿಲ್ 21ರಂದು ಮಳಲಿ ಮಸೀದಿಯನ್ನು ನವೀಕರಣ ಮಾಡಲು ಮುಂದಾಗಿದ್ದಾಗ, ಒಳಗಡೆ ದೇವಸ್ಥಾನ ಶೈಲಿಯ ವಾಸ್ತುಶಿಲ್ಪ ಸಾರ್ವಜನಿಕರಲ್ಲಿ ಕುತೂಹಲ ಮತ್ತು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಪ್ರಮುಖರು ಹೋರಾಟ ಕೈಗೆತ್ತಿಕೊಂಡು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವುದು ಸೇರಿದಂತೆ ಗ್ಯಾನವಾಪಿ ಮಾದರಿಯಲ್ಲೇ ಕೋರ್ಟ್ ಉಸ್ತುವಾರಿಯಲ್ಲೇ ತನಿಖೆಗೆ ಆಯೋಗ ರಚಿಸುವಂತೆ ಕೇಳಿಕೊಂಡಿದ್ದರು. ಇದೇ ವೇಳೆ, ಮಸೀದಿ ಕಮಿಟಿಯವರು ಹಿಂದುಗಳ ಪರ ದಾವೆಗೆ ಆಕ್ಷೇಪ ಸಲ್ಲಿಸಿದ್ದು, ಮಸೀದಿಯು ವಕ್ಫ್ ಆಸ್ತಿಯಾಗಿದ್ದು, ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಲು ಬರುವುದಿಲ್ಲ. ಈ ಕುರಿತು ಮೈಸೂರಿನ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ನಡೆಸಬೇಕು ಎಂದು ವಾದಿಸಿದ್ದರು. ಆದರೆ ಮಸೀದಿ ಕಮಿಟಿಯ ವಾದವನ್ನು ಮಂಗಳೂರಿನ ನ್ಯಾಯಾಲಯ ಪುರಸ್ಕರಿಸಿರಲಿಲ್ಲ. ಅಲ್ಲದೆ, ಮಸೀದಿ ನವೀಕರಣ ಮಾಡದಂತೆ ಮಂಗಳೂರಿನ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿತ್ತು.
ಮಂಗಳೂರು ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮಸೀದಿ ಕಮಿಟಿಯವರು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ವಾದ- ಪ್ರತಿವಾದ ನಡೆದಿತ್ತು. ಒಂದು ವರ್ಷದಿಂದ ನಡೆದುಬಂದ ವಿಚಾರಣೆ ಮುಗಿದಿದ್ದು, ಎರಡು ದಿನಗಳ ಹಿಂದೆ ಹೈಕೋರ್ಟ್ ಮಸೀದಿ ಕಮಿಟಿಯ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ. ಮಸೀದಿ ಕಮಿಟಿಯ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿರುವುದು ವಿಎಚ್ ಪಿ ಹೋರಾಟಕ್ಕೆ ಬಲ ಬಂದಂತಾಗಿದೆ. ಅಲ್ಲದೆ, ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿಯೇ ವಿಚಾರಣೆ ಮುಂದುವರಿಸಲು ಅನುಮತಿ ನೀಡಿದ್ದಾಗಿ ತಿಳಿದುಬಂದಿದೆ. ಹೈಕೋರ್ಟ್ ತೀರ್ಪು ಇನ್ನಷ್ಟೇ ಕೈಸೇರಬೇಕಿದ್ದು, ತೀರ್ಪಿನಲ್ಲೇನಿದೆ ಎನ್ನುವ ಬಗ್ಗೆ ಈಗಲೇ ಹೇಳಲಾಗದು ಎಂದು ವಿಎಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ತಿಳಿಸಿದ್ದಾರೆ.
Manglore Malali Masjid Row, Masjid application rejected in High court. VHP gets more power.Hindu temple-like architectural design was purportedly found underneath the Masjid on April 21. Communal clashes occurred within a month, leading to police imposing Section 144 in and around the disputed area for 24 hours to de-escalate the situation.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am