ಬ್ರೇಕಿಂಗ್ ನ್ಯೂಸ್
02-02-24 08:40 pm Mangalore Correspondent ಕರಾವಳಿ
ಮಂಗಳೂರು, ಫೆ.2: ಗ್ಯಾನವಾಪಿ ಮಸೀದಿ ಮಾದರಿಯಲ್ಲೇ ಮಳಲಿ ಮಸೀದಿಯನ್ನು ಪ್ರಾಚ್ಯವಸ್ತು ಇಲಾಖೆಯಿಂದ ಉತ್ಖನನ ಮಾಡಿಸಬೇಕು ಎಂದು ಹೋರಾಟಕ್ಕೆ ಮುಂದಾಗಿದ್ದ ವಿಶ್ವ ಹಿಂದು ಪರಿಷತ್ ಒತ್ತಾಯಕ್ಕೆ ಬಲ ಬಂದಿದೆ. ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು, ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆ ನಡೆಸುವ ಅಧಿಕಾರ ಇಲ್ಲವೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
2022ರ ಎಪ್ರಿಲ್ 21ರಂದು ಮಳಲಿ ಮಸೀದಿಯನ್ನು ನವೀಕರಣ ಮಾಡಲು ಮುಂದಾಗಿದ್ದಾಗ, ಒಳಗಡೆ ದೇವಸ್ಥಾನ ಶೈಲಿಯ ವಾಸ್ತುಶಿಲ್ಪ ಸಾರ್ವಜನಿಕರಲ್ಲಿ ಕುತೂಹಲ ಮತ್ತು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಪ್ರಮುಖರು ಹೋರಾಟ ಕೈಗೆತ್ತಿಕೊಂಡು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವುದು ಸೇರಿದಂತೆ ಗ್ಯಾನವಾಪಿ ಮಾದರಿಯಲ್ಲೇ ಕೋರ್ಟ್ ಉಸ್ತುವಾರಿಯಲ್ಲೇ ತನಿಖೆಗೆ ಆಯೋಗ ರಚಿಸುವಂತೆ ಕೇಳಿಕೊಂಡಿದ್ದರು. ಇದೇ ವೇಳೆ, ಮಸೀದಿ ಕಮಿಟಿಯವರು ಹಿಂದುಗಳ ಪರ ದಾವೆಗೆ ಆಕ್ಷೇಪ ಸಲ್ಲಿಸಿದ್ದು, ಮಸೀದಿಯು ವಕ್ಫ್ ಆಸ್ತಿಯಾಗಿದ್ದು, ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಲು ಬರುವುದಿಲ್ಲ. ಈ ಕುರಿತು ಮೈಸೂರಿನ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ನಡೆಸಬೇಕು ಎಂದು ವಾದಿಸಿದ್ದರು. ಆದರೆ ಮಸೀದಿ ಕಮಿಟಿಯ ವಾದವನ್ನು ಮಂಗಳೂರಿನ ನ್ಯಾಯಾಲಯ ಪುರಸ್ಕರಿಸಿರಲಿಲ್ಲ. ಅಲ್ಲದೆ, ಮಸೀದಿ ನವೀಕರಣ ಮಾಡದಂತೆ ಮಂಗಳೂರಿನ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿತ್ತು.
ಮಂಗಳೂರು ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮಸೀದಿ ಕಮಿಟಿಯವರು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ವಾದ- ಪ್ರತಿವಾದ ನಡೆದಿತ್ತು. ಒಂದು ವರ್ಷದಿಂದ ನಡೆದುಬಂದ ವಿಚಾರಣೆ ಮುಗಿದಿದ್ದು, ಎರಡು ದಿನಗಳ ಹಿಂದೆ ಹೈಕೋರ್ಟ್ ಮಸೀದಿ ಕಮಿಟಿಯ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ. ಮಸೀದಿ ಕಮಿಟಿಯ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿರುವುದು ವಿಎಚ್ ಪಿ ಹೋರಾಟಕ್ಕೆ ಬಲ ಬಂದಂತಾಗಿದೆ. ಅಲ್ಲದೆ, ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿಯೇ ವಿಚಾರಣೆ ಮುಂದುವರಿಸಲು ಅನುಮತಿ ನೀಡಿದ್ದಾಗಿ ತಿಳಿದುಬಂದಿದೆ. ಹೈಕೋರ್ಟ್ ತೀರ್ಪು ಇನ್ನಷ್ಟೇ ಕೈಸೇರಬೇಕಿದ್ದು, ತೀರ್ಪಿನಲ್ಲೇನಿದೆ ಎನ್ನುವ ಬಗ್ಗೆ ಈಗಲೇ ಹೇಳಲಾಗದು ಎಂದು ವಿಎಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ತಿಳಿಸಿದ್ದಾರೆ.
Manglore Malali Masjid Row, Masjid application rejected in High court. VHP gets more power.Hindu temple-like architectural design was purportedly found underneath the Masjid on April 21. Communal clashes occurred within a month, leading to police imposing Section 144 in and around the disputed area for 24 hours to de-escalate the situation.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm