ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.

ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm