ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.
ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm