ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm