ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm