ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm