ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm