ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm