ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm