ಬ್ರೇಕಿಂಗ್ ನ್ಯೂಸ್
06-02-24 09:33 pm Udupi Correspondent ಕರಾವಳಿ
ಉಡುಪಿ, ಫೆ.6: ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಹತ್ತು ವರ್ಷಗಳ ಬಳಿಕ ನಕ್ಸಲರ ಚಲನವಲನ ಪತ್ತೆಯಾಗಿರುವುದನ್ನು ಪೊಲೀಸ್ ಮೂಲಗಳು ದೃಢಪಡಿಸಿವೆ. ಒಂದು ತಿಂಗಳಿನಿಂದ ಈ ಭಾಗದಲ್ಲಿ ನಾಲ್ವರಿದ್ದ ತಂಡ ಓಡಾಡುತ್ತಿದ್ದು ಹಳ್ಳಿ ಭಾಗದ ಜನರಿಂದ ಪೊಲೀಸರ ಗಮನಕ್ಕೆ ಬಂದಿದೆ.
ಯೂನಿಫಾರಂ ಹಾಕಿದ ನಾಲ್ವರಿದ್ದ ತಂಡ ಈ ಪರಿಸರದ ಕೆಲವು ಮನೆಗಳಿಗೆ ಭೇಟಿ ಮಾಡಿದೆ. ನಾಲ್ವರ ಪೈಕಿ ಇಬ್ಬರಲ್ಲಿ ಶಸ್ತ್ರಾಸ್ತ್ರಗಳಿದ್ದವು ಎನ್ನಲಾಗಿದೆ. ಕೆಲವು ಮನೆಯವರು ನಕ್ಸಲರ ಭೇಟಿಗೆ ಅವಕಾಶ ನೀಡಿಲ್ಲ. ಕೆಲವು ಮನೆಯವರ ಬಳಿ ರಾತ್ರಿ ವೇಳೆ ಕಿಟಕಿಯಿಂದಷ್ಟೇ ಮಾತಾಡಿ ಹೋಗಿದ್ದಾರೆ. ಎರಡು ದಿನಗಳ ಹಿಂದೆಯೂ ಕೆಲವು ಮನೆಗಳಿಗೆ ಇವರು ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕೇರಳ ಭಾಗದಲ್ಲಿ ನಕ್ಸಲ್ ಚಟುವಟಿಕೆಗೆ ಪೊಲೀಸರ ನಿರಂತರ ಕಾರ್ಯಾಚರಣೆಯಿಂದ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲರು ಇದೀಗ ಕರ್ನಾಟಕಕ್ಕೆ ಬಂದಿರುವ ಸಾಧ್ಯತೆಯಿದ್ದು ಕುಂದಾಪುರ ಭಾಗದಲ್ಲಿ ಚಟುವಟಿಕೆ ಆರಂಭಿಸಿರುವ ಅನುಮಾನ ದಟ್ಟವಾಗಿದೆ. ಇಲ್ಲಿನ ಪರಿಸರದ ಮನೆಗಳಿಗೆ ಪೊಲೀಸರು ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕಿದ್ದಾರೆ. ಹತ್ತು ವರ್ಷಗಳ ಹಿಂದೆ ಎಎನ್ಎಫ್ ನಿರಂತರ ಕಾರ್ಯಾಚರಣೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗೆ ಬ್ರೇಕ್ ಬಿದ್ದಿತ್ತು. ಅಲ್ಲದೆ, ಕರ್ನಾಟಕದ ಪ್ರಮುಖ ನಕ್ಸಲ್ ನಾಯಕರು ಕೇರಳದ ವಯನಾಡಿನಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದರು.
ನಕ್ಸಲ್ ನಿಗ್ರಹದ ಕಾರಣಕ್ಕೆ ಸ್ಥಾಪಿಸಿದ್ದ ಏಂಟಿ ನಕ್ಸಲ್ ಫೋರ್ಸ್ ಕಾರ್ಕಳದಲ್ಲಿ ಠಿಕಾಣಿ ಹೂಡಿದ್ದರೂ, ಕಳೆದ ಐದಾರು ವರ್ಷಗಳಲ್ಲಿ ಕೆಲಸ ಇಲ್ಲದೆ ಕುಳಿತು ಬಿಟ್ಟಿದೆ. ಹಾಗಿದ್ದರೂ ಎಎನ್ಎಫ್ ಪಡೆಯನ್ನು ಸರ್ಕಾರ ಹಿಂದಕ್ಕೆ ಕರೆಸಿಕೊಂಡಿಲ್ಲ. ಗಲಭೆ ಇನ್ನಿತರ ತುರ್ತು ಸಂದರ್ಭದಲ್ಲಿ ಅಗತ್ಯ ಬಿದ್ದರೆ ಕಾರ್ಯಾಚರಣೆಗೆಂದು ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಬೈಂದೂರಿನ ನಕ್ಸಲ್ ಚಟುವಟಿಕೆ ಬಗ್ಗೆ ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳಲ್ಲಿ ಕೇಳಿದರೆ, ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಯಾರೋ ಟೂರಿಸ್ಟ್ ಆಗಿರಬಹುದೆಂದು ಹಾರಿಕೆಯ ಉತ್ತರವನ್ನು ನೀಡುತ್ತಿದ್ದಾರೆ. ಆದರೆ ಹಸುರು ಬಣ್ಣದ ಯೂನಿಫಾರ್ಮ್ ಮತ್ತು ಶಸ್ತ್ರಾಸ್ತ್ರ ಇತ್ತೆನ್ನುವ ವಿಚಾರ ನಕ್ಸಲರು ಎನ್ನುವುದನ್ನು ಒತ್ತಿ ಹೇಳುತ್ತಿವೆ.
Naxalites with weapons found at Byndoor in Udupi.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm