ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm