ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.
ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm