ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.
ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm