ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.
ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
29-03-24 08:26 pm
Bangalore Correspondent
S.L. Bhyrappa, Narendra Modi: ಮೋದಿಯೇ ಮತ್ತೆ ಪ್...
29-03-24 07:54 pm
Bidar illicit affair, husband suicide: ಬೀದರ್...
29-03-24 05:37 pm
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
29-03-24 08:20 pm
HK News Desk
ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್...
28-03-24 10:51 pm
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
29-03-24 07:02 pm
Udupi Correspondent
Bantwal Panchayat secretary goes missing: ಬಂಟ...
29-03-24 01:49 pm
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
29-03-24 06:17 pm
Mangalore Correspondent
ಕೋವಿಡ್ ಸಮಯದಲ್ಲಿ ಉದ್ಯೋಗ ಕಳಕೊಂಡಿದ್ದ ಟೆಕ್ಕಿ ; ಲ...
29-03-24 05:09 pm
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm