ಬ್ರೇಕಿಂಗ್ ನ್ಯೂಸ್
07-02-24 04:25 pm Mangalore Correspondent ಕರಾವಳಿ
ಉಳ್ಳಾಲ, ಫೆ.7: ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ , ಸ್ಪೀಕರ್ ಯು.ಟಿ.ಖಾದರ್ ಆಪ್ತ, ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಪದ್ಮನಾಭ ನರಿಂಗಾನ(77) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸದಾ ಲವಲವಿಕೆಯಿಂದಿದ್ದ ಪದ್ಮನಾಭರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಪರೂಪದ ಪ್ರಾಮಾಣಿಕ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪದ್ಮನಾಭ ಅವರು ಸಾಮಾನ್ಯ ಬಡತನದ ಕುಟುಂಬದಿಂದ ಬಂದು ತನ್ನ ಅಪರಿಮಿತ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೇಲೆ ಬಂದವರು. ಎರಡು ಬಾರಿ ನರಿಂಗಾನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದರು.
ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಜನಾನುರಾಗಿಯಾಗಿದ್ದರು. ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಈ (2023) ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಪದ್ಮನಾಭರಿಗೆ ಲಭಿಸಿತ್ತು. ಪದ್ಮನಾಭರ ಮಗ ಮೋಹನ್ ಅವರು ಸರಕಾರಿ ವಾಹನ ಚಾಲಕರು. ಮೋಹನ್ ಸ್ಪೀಕರ್ ಯು.ಟಿ.ಖಾದರ್ ಸಚಿವರಾಗಿದ್ದಾಗಲೂ ಅವರಿಗೆ ಚಾಲಕರಾಗಿದ್ದರು. ಈಗ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕಾರು ಚಾಲಕರಾಗಿದ್ದಾರೆ. ಮಗ ಜಿಲ್ಲಾಧಿಕಾರಿಯ ಕಾರು ಚಾಲಕನಾದರೂ ಅದರ ಯಾವುದೇ ಲಾಭ ಪಡೆಯದ ಪದ್ಮನಾಭರು ಸಿಂಪಲ್ ಆಗಿದ್ದರು.
ಹಿಂದಿನ ಕಮ್ಯೂನಿಸ್ಟ್ ಧುರೀಣ ಮಹಾಬಲೇಶ್ವರ ಭಟ್ಟರ ಪ್ರೇರಣೆಯಿಂದ ಕಮ್ಯೂನಿಸ್ಟ್ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶ ಮಾಡಿದ ಪದ್ಮನಾಭ ಅವರು ಅನೇಕ ವರ್ಷಗಳ ಕಾಲ ಸಿಪಿಐ ಪಕ್ಷದಲ್ಲಿ ಸಕ್ರಿಯವಾಗಿ ದುಡಿದವರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ನರಿಂಗಾನ ಕಂಬಳ ಸಮಿತಿಯ ಗೌರವ ಸಲಹೆಗಾರರೂ, ಅಹಿಂದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಇದ್ದಾರೆ.
ಫೆ.8ರ ಗುರುವಾರ(ನಾಳೆ) ಬೆಳಗ್ಗೆ 10 ಗಂಟೆಗೆ ಪದ್ಮನಾಭರ ನರಿಂಗಾನದ ಸ್ವಗೃಹದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಬಳಿಕ ಅಂತ್ಯಕ್ರಿಯೆ ನಡೆಯಲಿದೆಯೆಂದು ಕುಟುಂಬಸ್ಥರು ತಿಳಿಸಿದ್ದಾರೆ.
Mangalore Congress senior leader Padmanaba Naringana close member of speaker UT Khader dies at 77
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm