ಬ್ರೇಕಿಂಗ್ ನ್ಯೂಸ್
07-02-24 04:25 pm Mangalore Correspondent ಕರಾವಳಿ
ಉಳ್ಳಾಲ, ಫೆ.7: ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ , ಸ್ಪೀಕರ್ ಯು.ಟಿ.ಖಾದರ್ ಆಪ್ತ, ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಪದ್ಮನಾಭ ನರಿಂಗಾನ(77) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸದಾ ಲವಲವಿಕೆಯಿಂದಿದ್ದ ಪದ್ಮನಾಭರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಪರೂಪದ ಪ್ರಾಮಾಣಿಕ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪದ್ಮನಾಭ ಅವರು ಸಾಮಾನ್ಯ ಬಡತನದ ಕುಟುಂಬದಿಂದ ಬಂದು ತನ್ನ ಅಪರಿಮಿತ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೇಲೆ ಬಂದವರು. ಎರಡು ಬಾರಿ ನರಿಂಗಾನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದರು.
ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಜನಾನುರಾಗಿಯಾಗಿದ್ದರು. ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಈ (2023) ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಪದ್ಮನಾಭರಿಗೆ ಲಭಿಸಿತ್ತು. ಪದ್ಮನಾಭರ ಮಗ ಮೋಹನ್ ಅವರು ಸರಕಾರಿ ವಾಹನ ಚಾಲಕರು. ಮೋಹನ್ ಸ್ಪೀಕರ್ ಯು.ಟಿ.ಖಾದರ್ ಸಚಿವರಾಗಿದ್ದಾಗಲೂ ಅವರಿಗೆ ಚಾಲಕರಾಗಿದ್ದರು. ಈಗ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕಾರು ಚಾಲಕರಾಗಿದ್ದಾರೆ. ಮಗ ಜಿಲ್ಲಾಧಿಕಾರಿಯ ಕಾರು ಚಾಲಕನಾದರೂ ಅದರ ಯಾವುದೇ ಲಾಭ ಪಡೆಯದ ಪದ್ಮನಾಭರು ಸಿಂಪಲ್ ಆಗಿದ್ದರು.
ಹಿಂದಿನ ಕಮ್ಯೂನಿಸ್ಟ್ ಧುರೀಣ ಮಹಾಬಲೇಶ್ವರ ಭಟ್ಟರ ಪ್ರೇರಣೆಯಿಂದ ಕಮ್ಯೂನಿಸ್ಟ್ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶ ಮಾಡಿದ ಪದ್ಮನಾಭ ಅವರು ಅನೇಕ ವರ್ಷಗಳ ಕಾಲ ಸಿಪಿಐ ಪಕ್ಷದಲ್ಲಿ ಸಕ್ರಿಯವಾಗಿ ದುಡಿದವರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ನರಿಂಗಾನ ಕಂಬಳ ಸಮಿತಿಯ ಗೌರವ ಸಲಹೆಗಾರರೂ, ಅಹಿಂದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಇದ್ದಾರೆ.
ಫೆ.8ರ ಗುರುವಾರ(ನಾಳೆ) ಬೆಳಗ್ಗೆ 10 ಗಂಟೆಗೆ ಪದ್ಮನಾಭರ ನರಿಂಗಾನದ ಸ್ವಗೃಹದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಬಳಿಕ ಅಂತ್ಯಕ್ರಿಯೆ ನಡೆಯಲಿದೆಯೆಂದು ಕುಟುಂಬಸ್ಥರು ತಿಳಿಸಿದ್ದಾರೆ.
Mangalore Congress senior leader Padmanaba Naringana close member of speaker UT Khader dies at 77
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm