ಬ್ರೇಕಿಂಗ್ ನ್ಯೂಸ್
07-02-24 06:25 pm Udupi Correspondent ಕರಾವಳಿ
ಉಡುಪಿ, ಫೆ.7: ಬೈಂದೂರಿನ ಮುದೂರು, ಜಡ್ಕಲ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ. ಅಲ್ಲದೆ, ಸ್ಥಳಕ್ಕೆ ಕಾರ್ಕಳ, ಹೆಬ್ರಿಯಲ್ಲಿದ್ದ ಏಂಟಿ ನಕ್ಸಲ್ ಫೋರ್ಸ್ ದಳದವರು ತೆರಳಿದ್ದು ಕೂಂಬಿಂಗ್ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮುದೂರು, ಜಡ್ಕಲ್ ಮತ್ತು ಬೆಳ್ಕಳ್ ಪ್ರದೇಶದ ಕಾಡು ಪರಿಸರದಲ್ಲಿ ಹಸುರು ಯೂನಿಫಾರ್ಮ್ ಹಾಕ್ಕೊಂಡಿದ್ದ ನಾಲ್ಕೈದು ಮಂದಿಯಿದ್ದ ನಕ್ಸಲರು ಕಳೆದ ಒಂದು ತಿಂಗಳಿನಿಂದ ಆಗಿಂದಾಗ್ಗೆ ಜನರಿಗೆ ಕಾಣ ಸಿಕ್ಕಿದ್ದಾರೆ. ಈ ಬಗ್ಗೆ ಅಲ್ಲಿನ ಜನರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮಾಹಿತಿ ಕಲೆಹಾಕಿದ್ದಾರೆ. ಕೆಲವರು ಶಸ್ತ್ರ ಹಿಡಿದುಕೊಂಡಿದ್ದವರನ್ನು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅದು ನಕ್ಸಲರದ್ದೇ ತಂಡ ಆಗಿರಬಹುದು ಎನ್ನುವ ಶಂಕೆ ಮೂಡಿದೆ.
ಆದರೆ ಕಳೆದ ಹತ್ತು ವರ್ಷಗಳಿಂದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿರಲಿಲ್ಲ. ಕೇರಳದ ವಯನಾಡು, ಕಣ್ಣೂರು ಭಾಗದ ಕಾಡುಗಳಲ್ಲಿ ನಕ್ಸಲರಿದ್ದರೂ ಇಲ್ಲಿ ಎಎನ್ಎಫ್ ಠಿಕಾಣಿ ಹೂಡಿದ್ದರಿಂದ ಮತ್ತೆ ಪ್ರತ್ಯಕ್ಷ ಆಗಿರಲಿಲ್ಲ. ಕಳೆದ ಎರಡು ತಿಂಗಳಲ್ಲಿ ಕೇರಳ ಭಾಗದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿದ್ದರಿಂದ ಆ ಕಡೆಯಿಂದ ಕರ್ನಾಟಕಕ್ಕೆ ನಕ್ಸಲರು ಬಂದಿರಬಹುದು ಎನ್ನುವ ಗುಮಾನಿಯಿದೆ. ಹಾಗೆ ಬಂದಿದ್ದೇ ಆದಲ್ಲಿ ಕೇರಳದಿಂದ ಕೊಡಗಿನ ಮೂಲಕವೇ ಕರ್ನಾಟಕಕ್ಕೆ ಬರಬೇಕಿದೆ. ಇಂಥ ಮಾಹಿತಿ ಅಧಿಕೃತವಾಗಿ ಸಿಕ್ಕಿಲ್ಲವಾದರೂ, ಕೊಡಗು, ದಕ್ಷಿಣ ಕನ್ನಡದ ಪಶ್ಚಿಮ ಘಟ್ಟದ ಕಾಡುಗಳಿಂದಲೇ ಉಡುಪಿ ಸೇರಿರುವ ಸಾಧ್ಯತೆಯಿದೆ. ಅಲ್ಲದೆ, ನಕ್ಸಲರ ತಂಡವನ್ನು ಹಳೆ ನಕ್ಸಲ್ ವಿಕ್ರಂ ಗೌಡ ಅಥವಾ ರಾಯಚೂರು ಮೂಲದ ರಾಜಣ್ಣ ಮುನ್ನಡೆಸುತ್ತಿರುವ ಸಾಧ್ಯತೆ ಬಗ್ಗೆ ಹೇಳಲಾಗುತ್ತಿದೆ.
ಸದ್ಯಕ್ಕೆ ಕಾರ್ಕಳ, ಹೆಬ್ರಿ ಮತ್ತು ಅಮಾಸೆಬೈಲು ಪರಿಸರದಲ್ಲಿ ಕ್ಯಾಂಪ್ ಹಾಕಿದ್ದ ಎಎನ್ಎಫ್ ಪಡೆ ಅಲರ್ಟ್ ಆಗಿದ್ದು, ಕುಂದಾಪುರ, ಬೈಂದೂರಿನತ್ತ ತೆರಳಿದೆ. ಕಾಡು ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಗೆ ಮುಂದಾಗಿದೆ ಎನ್ನುವ ಮಾಹಿತಿ ಇದೆ. ಆದರೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಿಲ್ಲ.
The Anti-Naxal Force (ANF) has been put on high alert after movement of Naxals was reported in parts of Chikkamagalur and Udupi. It is suspected that the Naxals, led by Vikram Gowda, are preparing to organise a ‘Martyr’s Day’ to honour Naxal leader Saket Rajan who was killed in an early morning encounter on February 6, 2005 near Menasinahadya in Koppa taluk.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm