ಬ್ರೇಕಿಂಗ್ ನ್ಯೂಸ್
23-11-20 04:29 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪದವಿ ಕಾಲೇಜು ಆರಂಭಗೊಂಡು ವಾರ ಕಳೆಯುತ್ತಿದ್ದು, ಕಾಲೇಜು ತೆರಳುವ ಮುನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದ್ದು, ಈವರೆಗೆ ಟೆಸ್ಟ್ ಆಗಿ ರಿಪೋರ್ಟ್ ಬಂದಿದ್ದರಲ್ಲಿ 29 ವಿದ್ಯಾರ್ಥಿಗಳು ಮಾತ್ರ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಬಂದಿದ್ದ ಆರು ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗುತ್ತಿದೆ. ಶನಿವಾರ ರಾತ್ರಿ ವರೆಗೆ 16,441 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 17 ಸಾವಿರ ವಿದ್ಯಾರ್ಥಿಗಳ ಪೈಕಿ ಕೇವಲ 29 ಮಂದಿಗೆ ಮಾತ್ರ ಕೋವಿಡ್ ಕಂಡುಬಂದಿದ್ದು ಅತ್ಯಂತ ಸಂತಸದ ಬೆಳವಣಿಗೆಯಾಗಿದೆ. ಕೊರೊನಾ ನಮ್ಮನ್ನು ಬಿಟ್ಟು ದೂರ ಹೋಗುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
As colleges have reopened in Mangalore the over all attendance on the first day was 17 thousand in which only 29 students have been tested covid positive.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm