Congress, Mp Nalin Kateel, BJP, Mangalore: ಸಂಸದ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಯತ್ನ ; ಎನ್ಎಸ್ ಯುಐ ಕಾರ್ಯಕರ್ತರು ಪೊಲೀಸ್ ವಶಕ್ಕೆ 

08-02-24 01:09 pm       Mangalore Correspondent   ಕರಾವಳಿ

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಮಂಗಳೂರು, ಫೆ.8: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ‌

ಉರ್ವಾದಲ್ಲಿ ಅಪಾರ್ಟ್ಮೆಂಟ್ ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಎನ್ಎಸ್ ಯುಐ ಕಾರ್ಯಕರ್ತರನ್ನು ತಡೆದಿದ್ದಾರೆ. ಕೇಂದ್ರ ಸರ್ಕಾರ, ನಳಿನ್ ಕುಮಾರ್, ಬಿಜೆಪಿ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. 

ಪೊಲೀಸ್ ಬಂದೋಬಸ್ತ್  ನಡುವೆ ಎನ್ಎಸ್ಯು ಐ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ, ಯಾವುದೇ ಸರ್ಕಾರಿ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ‌. ಇದಕ್ಕೆ ಅಸಮರ್ಥ ಸಂಸದನೇ ಕಾರಣ ಎಂದು ದೂರಿದ್ದಾರೆ.

Congress NSUI Gherao Mangalore Mp Nalin Kateel house at Urwa over biased fiscal policies by the Centre towards the national capital.