ಬ್ರೇಕಿಂಗ್ ನ್ಯೂಸ್
08-02-24 04:26 pm Udupi Correspondent ಕರಾವಳಿ
ಉಡುಪಿ, ಫೆ.8: ಭಾರೀ ಅವ್ಯವಹಾರದ ಆರೋಪಕ್ಕೀಡಾದ ಕಾರ್ಕಳ ತಾಲೂಕಿನ ಪರಶುರಾಮ ಥೀಮ್ ಪಾರ್ಕ್ ಕುರಿತ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಓಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ಮತ್ತು ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದರು. ಆನಂತರ, ಪರಶುರಾಮ ಪ್ರತಿಮೆಯೇ ನಾಪತ್ತೆಯಾಗಿದ್ದೂ ಆಗಿತ್ತು. ಅಲ್ಲದೆ, ಆ ಮೂರ್ತಿ ಅರ್ಧ ನಕಲಿ, ಕಂಚಿನಿಂದ ನಿರ್ಮಿಸಿಲ್ಲ ಎನ್ನುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.
ಪರಶುರಾಮ ಮೂರ್ತಿ ನಕಲಿ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ನಿರ್ಮಿತಿ ಕೇಂದ್ರದವರೇ ಮೂರ್ತಿಯನ್ನು ತೆರವು ಮಾಡಿದ್ದರು. ಅದರ ಪೂರ್ತಿ ಕಾಮಗಾರಿ ಆಗಿಲ್ಲ ಎಂದು ಹೇಳಿ ಥೀಮ್ ಪಾರ್ಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿತ್ತು. ಪರಶುರಾಮ ಮೂರ್ತಿ ಮತ್ತು ಥೀಮ್ ಪಾರ್ಕ್ ಕಾಮಗಾರಿ ಒಟ್ಟು 11 ಕೋಟಿ ವೆಚ್ಚದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಉಸ್ತುವಾರಿಯಲ್ಲೇ ನಡೆದಿತ್ತು. ಹೀಗಾಗಿ ಅವ್ಯವಹಾರಕ್ಕೆ ಕಾರ್ಕಳ ಶಾಸಕರೇ ಕಾರಣ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಈ ಬಗ್ಗೆ ಕಾಂಗ್ರೆಸ್ ಮತ್ತು ಸಾಮಾಜಿಕ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು.
ಎರಡು ದಿನಗಳ ಹಿಂದೆ ಕಾರ್ಕಳ ಕಾಂಗ್ರೆಸ್ ಪ್ರಮುಖರೊಬ್ಬರು, ಥೀಮ್ ಪಾರ್ಕ್ ಅವ್ಯವಹಾರದ ಬಗ್ಗೆ ತನಿಖೆ ಮಾಡದೇ ಇದ್ದರೆ ಪಕ್ಷದ ಚಟುವಟಿಕೆಯಿಂದ ದೂರ ಇರುವುದಾಗಿ ಹೇಳಿದ್ದರು. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಪ್ರಕರಣವನ್ನು ವಿಶೇಷ ತನಿಖಾ ಸಂಸ್ಥೆಗೆ ವಹಿಸುವ ವರೆಗೂ ನಾವು ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅಭಿಯಾನ ಆರಂಭಿಸಿದ್ದರು. ಒಂದೆಡೆ ಕಾರ್ಯಕರ್ತರ ಒತ್ತಡ, ಮತ್ತೊಂದೆಡೆ ಸುದ್ದಿ ಮಾಧ್ಯಮದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಿದ್ದಾರೆ.
Chief minister (CM) Siddaramaiah has directed the initiation of a CID (Criminal Investigation Department) probe into the Parashuram Theme Park issue in Karkala. The directive was issued on February 6, by the CM himself.The decision to launch the investigation comes in response to mounting concerns raised by numerous social activists and leaders from the Karkala Congress.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm