ಬ್ರೇಕಿಂಗ್ ನ್ಯೂಸ್
08-02-24 10:18 pm Mangalore Correspondent ಕರಾವಳಿ
ಪುತ್ತೂರು, ಫೆ.8: ಬಂಡಾಯ ಸ್ಪರ್ಧೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಪುತ್ತೂರಿನ ‘ಪುತ್ತಿಲ ಪರಿವಾರ’ವನ್ನು ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸಲು ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ಮಾಧ್ಯಮಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ.
ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರೇ ಪುತ್ತಿಲ ಪರಿವಾರದ ವಿಲೀನ ಮತ್ತು ಬಂಡಾಯ ಸ್ಪರ್ಧಿಸಿದ್ದ ಅರುಣ್ ಪುತ್ತಿಲ ಅವರಿಗೆ ಸೂಕ್ತ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಪುತ್ತೂರಿನಲ್ಲಿ ಸಭೆ ಸೇರಿದ್ದ ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನಗೊಳ್ಳಲು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಜೊತೆಗೆ ಸೇರ್ಪಡೆಗೆ ಮೂರು ದಿನಗಳ ಗಡುವನ್ನು ವಿಧಿಸಿತ್ತು. ಆ ಗಡುವು ಗುರುವಾರ ಮುಗಿಯುವುದರೊಳಗೆ ಶುಭ ಸುದ್ದಿಯನ್ನು ಬಿಜೆಪಿ ರಾಜ್ಯ ನಾಯಕರು ಪುತ್ತಿಲ ಪರಿವಾರಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಅರುಣ್ ಪುತ್ತಿಲ ಸ್ಥಾನಮಾನದ ಬಗ್ಗೆ ಅಂತಿಮ ಮಾತುಕತೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಇದೆ.
ಪುತ್ತೂರಿನಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಕಾಂಗ್ರೆಸಿಗೆ ಪೈಪೋಟಿ ನೀಡಿದ್ದಲ್ಲದೆ ಬಿಜೆಪಿಯನ್ನು ಹೀನಾಯ ರೀತಿಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದರಿಂದ ರಾಜ್ಯ ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಈಗ ರಾಜ್ಯ ಬಿಜೆಪಿಯಲ್ಲಿ ತಂಡ ಬದಲಾಗಿದ್ದು ಮಾಜಿ ಸಿಎಂ ಯಡಿಯೂರಪ್ಪ ಅವರೇ ಪಕ್ಷದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರಿನ ಬಿಜೆಪಿ ನಾಯಕರ ವಿರೋಧ ಇದ್ದರೂ ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದು ಲೋಕಸಭೆ ಚುನಾವಣೆಗೆ ಬಂಡಾಯ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.
Independant candidate Puttur Arun Puthila to rejoin BJP. BJP party had set a three-day deadline for the party to make an official announcement in this regard. Should the BJP fail to comply, Puthila Parivar has resolved to contest the upcoming Lok Sabha elections independently.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm