ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm