ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm