ಬ್ರೇಕಿಂಗ್ ನ್ಯೂಸ್
09-02-24 05:25 pm Mangaluru Correspondent ಕರಾವಳಿ
ಮಂಗಳೂರು, ಫೆ.9: ಸ್ಕೂಟರ್ ಚಲಾಯಿಸುತ್ತಿದ್ದಾಗ ನಾಯಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಂಬವೊಂದಕ್ಕೆ ಡಿಕ್ಕಿಯಾದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮರೋಳಿ ಬಳಿ ನಡೆದಿದೆ.
ಕುಲಶೇಖರ ನಿವಾಸಿ ಸ್ಟಾನ್ಲೀ – ಸುನೀತಾ ಡಿಸೋಜ ದಂಪತಿಯ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಟೆರ್ರೆನ್ಸ್ ಡಿಸೋಜ(21) ಮೃತ ಯುವಕ. ಗುರುವಾರ ರಾತ್ರಿ 10 ಗಂಟೆ ವೇಳೆಗೆ ಯುವಕ ಕುಲಶೇಖರ್ ಕೋರ್ಡೆಲ್ ಚರ್ಚ್ ನಲ್ಲಿ ಹೆತ್ತವರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಬಳಿಕ ಪಡೀಲ್ ಪೆಟ್ರೋಲ್ ಪಂಪ್ ಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದ. ಈ ವೇಳೆ, ಬಿಕರ್ನಕಟ್ಟೆಯ ಫ್ಲೈಓವರ್ ಬಳಿಯಿಂದ ಸರ್ವಿಸ್ ರಸ್ತೆಯಲ್ಲಿ ಹೋಗುವಾಗಲೇ ನಾಯಿ ಮರಿಯೊಂದು ಹಠಾತ್ ರಸ್ತೆಗೆ ಅಡ್ಡ ಬಂದಿದ್ದು ಅದನ್ನು ತಪ್ಪಿಸಲು ಯತ್ನಿಸಿದ್ದಾನೆ. ವೇಗವಾಗಿದ್ದ ಸ್ಕೂಟರ್ ನೇರವಾಗಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹೆಲ್ಮೆಟ್ ಹಾಕಿಲ್ಲದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು.

ಕೂಡಲೇ ಸ್ಥಳೀಯರು ಹುಡುಗನನ್ನು ಎಜೆ ಆಸ್ಪತ್ರೆಗೆ ಒಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನುರಿತ ವೈದ್ಯರು ಲಭ್ಯರಿಲ್ಲ ಎಂದು ಬೇರೆ ಕಡೆಗೆ ಒಯ್ಯಲು ತಿಳಿಸಿದ್ದಾರೆ. ಬಳಿಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ತಡರಾತ್ರಿ 1.30 ಗಂಟೆ ವೇಳೆಗೆ ಯುವಕ ಮೃತಪಟ್ಟಿದ್ದಾನೆ.
ಟೆರ್ರೆನ್ಸ್ ಡಿಸೋಜ ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಇತರೇ ಚಟುವಟಿಕೆಗಳಲ್ಲಿಯೂ ಸಕ್ರಿಯನಾಗಿದ್ದ. ನಿನ್ನೆ ರಾತ್ರಿ ಕೋರ್ಡೆಲ್ ಚರ್ಚ್ ನಲ್ಲಿ ಕಾರ್ಯಕ್ರಮ ನಡೆದಿದ್ದು ಅದರಲ್ಲಿ ತಂದೆ, ತಾಯಿಯೂ ಪಾಲ್ಗೊಂಡಿದ್ದರು. ಅಪಘಾತದಲ್ಲಿ ಟೆರ್ರೆನ್ಸ್ ಸಾವಿಗೀಡಾಗಿರುವುದು ಸ್ನೇಹಿತ ವಲಯದಲ್ಲಿ ಶಾಕ್ ಮೂಡಿಸಿದೆ. ಬಿಕರ್ನಕಟ್ಟೆಯಲ್ಲಿ ರಸ್ತೆ ಬದಿ ನಾಯಿಗಳಿಗೆ ಊಟ ಹಾಕುವುದರಿಂದ ಬೀದಿ ನಾಯಿಗಳ ಉಪಟಳ ಹೆಚ್ಚಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
Terrence D'Souza, a Mangalore St Josephs college Engineer student, was killed when his two-wheeler slammed into an iron pole after a dog unexpectedly appeared in the center of the road. The victim, identified as Terrence D'Souza (21), son of Stanley and Sunitha D'Souza from Kulshekar,
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm