ಬ್ರೇಕಿಂಗ್ ನ್ಯೂಸ್
10-02-24 08:22 pm Mangalore Correspondent ಕರಾವಳಿ
ಉಳ್ಳಾಲ, ಫೆ.10: ಕನಸು ನನಸಾಗಲು ಪ್ರಯತ್ನ ಬೇಕು. ಬಡವನಾಗಿ ಹುಟ್ಟಬಹುದು ಬಡವನಾಗಿಯೇ ಸಾಯಬೇಕೆಂದೇನಿಲ್ಲ, ಮಕ್ಕಳು ಉತ್ತಮ ಶಿಕ್ಷಣ ಪಡೆದರಷ್ಟೇ ಕುಟುಂಬದ ಸಮಸ್ಯೆಗಳನ್ನ ಪರಿಹರಿಸಲು ಸಾಧ್ಯ. ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುವ ಸಲುವಾಗಿ ಕಿನ್ಯಾ ಗ್ರಾಮವೊಂದಕ್ಕೆ ಶಿಕ್ಷಣಕ್ಕಾಗಿ 80 ಲಕ್ಷ ರೂ. ಮೀಸಲಿಟ್ಟಿರುವುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಕಿನ್ಯ ಗ್ರಾಮದ ಬೆಳರಿಂಗೆ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ ನಿರ್ಮಾಣಗೊಂಡ ಸುಸಜ್ಜಿತ ನೂತನ ಕಟ್ಟಡವನ್ನ ಅವರು ಉದ್ಘಾಟಿಸಿದರು. 2022ರ ಮೇ ತಿಂಗಳಲ್ಲಿ ಸುರಿದ ಮೊದಲ ಧಾರಾಕಾರ ಮಳೆಗೆ ಬೆಳರಿಂಗೆ ಪ್ರಾಥಮಿಕ ಶಾಲೆಯ ಹಂಚಿನ ಛಾವಣಿಯ ಕಟ್ಟಡವು ಧರೆಗುರುಳಿತ್ತು. ಶಾಲಾರಂಭದ ಹಿಂದಿನ ರಾತ್ರಿ ಘಟನೆ ನಡೆದುದರಿಂದ ಗಂಡಾಂತರ ತಪ್ಪಿತ್ತು. ಕಟ್ಟಡ ಶಿಥಿಲಗೊಂಡಿದ್ದರೂ ಅಧಿಕಾರಿಗಳ ಅಸಡ್ಡೆಯಿಂದ ಘಟನೆ ಸಂಭವಿಸಿದ್ದು ಭಾರೀ ಜನಾಕ್ರೋಶ ಉಂಟಾಗಿತ್ತು. ಪಕ್ಕದ ಮದರಸದ ಕೊಠಡಿಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿತ್ತು.










ಸ್ಥಳೀಯ ಶಾಸಕ ಯು.ಟಿ ಖಾದರ್ ಮುತುವರ್ಜಿಯಲ್ಲಿ ಇದೀಗ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾಗಿದೆ. ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದ ಖಾದರ್, ನಮ್ಮ ಕುಟುಂಬದ ಸಮಸ್ಯೆಗಳನ್ನ ಸರಕಾರ ಪರಿಹರಿಸಲು ಸಾಧ್ಯವಿಲ್ಲ. ಮನೆಯ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಹೆತ್ತವರ ಕನಸನ್ನ ನನಸು ಮಾಡಿದಾಗಲೇ ಕುಟುಂಬದ ಸಮಸ್ಯೆ ಪರಿಹಾರ ಆಗಲು ಸಾಧ್ಯ. ಕಿನ್ಯ ಗ್ರಾಮವೊಂದಕ್ಕೆ ಶಿಕ್ಷಣಕ್ಕಾಗಿ 80 ಲಕ್ಷ ಅನುದಾನ ಮೀಸಲಿಟ್ಟಿದ್ದು ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡೆಯಬೇಕೆಂದರು.
ಕೇವಲ ಎಂಟು ತಿಂಗಳಲ್ಲೇ ಬೆಳರಿಂಗೆ ಶಾಲೆಗೆ ಈ ರೀತಿಯ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲು ಜನರು ಕೊಟ್ಟ ಮತಗಳೇ ಕಾರಣ. ಶಾಲೆಗೆ ಅಂಗನವಾಡಿ ಕಟ್ಟಡ, ಆವರಣ ಗೋಡೆಯನ್ನ ಶೀಘ್ರ ನಿರ್ಮಿಸಲಾಗುವುದೆಂದರು. ಕಿನ್ಯಾ ಗ್ರಾಮದ ಮೀನಾದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ನಿರ್ಮಾಣಗೊಂಡ ನೂತನ ಕೊಠಡಿಯನ್ನು ಸ್ಪೀಕರ್ ಖಾದರ್ ಉದ್ಘಾಟಿಸಿದರು. ಕಿನ್ಯ ಗ್ರಾಮದ ಉಕ್ಕುಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೂ ಶಿಲಾನ್ಯಾಸಗೈದರು. ಕಿನ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷರಾದ ಫಾರೂಕ್ ಕಿನ್ಯ, ಮಾಜಿ ಅಧ್ಯಕ್ಷ ಸಿರಾಜ್ ಕಿನ್ಯ, ಪಿಡಿಒ ತುಳಸಿ, ಕೆಡಿಪಿ ಸದಸ್ಯರಾದ ಹಮೀದ್ ಕಿನ್ಯ, ಕಾಂಗ್ರೆಸ್ ಮುಖಂಡ ಎನ್.ಎಸ್ ಕರೀಂ ಮೊದಲಾದವರು ಉಪಸ್ಥಿತರಿದ್ದರು.
In order to give more thrust to education, a sum of Rs 80 lakh has been sanctioned to the school that was collapsed at Kinya for education. Assembly Speaker U T Khader said the reservation was made.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm