ಬ್ರೇಕಿಂಗ್ ನ್ಯೂಸ್
10-02-24 10:34 pm Mangalore Correspondent ಕರಾವಳಿ
ಮಂಗಳೂರು, ಫೆ.10: ಕರಾವಳಿಯ ತುಳುನಾಡಿನ ಜನರು ಆರಾಧಿಸುವ ದೈವಗಳ ಬಗ್ಗೆ ಸಿನಿಮಾ, ಸೀರಿಯಲ್ ಮಾಡುತ್ತಿರುವುದಕ್ಕೆ ದೈವಾರಾಧಕರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ದೈವಾರಾಧನೆ ಆಧರಿಸಿ ಕಾವೇರಿ ಎನ್ನುವ ಹೆಸರಿನ ಸೀರಿಯಲ್ ಬಂದಿದ್ದು, ಅದರ ಪ್ರೋಮೋ ಬರುತ್ತಲೇ ಪ್ರಸಾರ ತಡೆಹಿಡಿಯುವಂತೆ ಮಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.
ದೈವಾರಾಧನೆಯನ್ನೇ ಮುಂದಿಟ್ಟು ಮಾಡಿದ್ದ ಕಾಂತಾರ ಸಿನಿಮಾ ಹಿಟ್ ಆದಬಳಿಕ ದೈವಗಳ ನಂಬಿಕೆಯನ್ನೇ ಆಧರಿಸಿ ಕೆಲವರು ಸಿನಿಮಾ, ಸೀರಿಯಲ್ ಮಾಡಲು ಆರಂಭಿಸಿದ್ದಾರೆ. ಕನ್ನಡದ ಸುವರ್ಣ ವಾಹಿನಿಯಲ್ಲಿ ಕಾವೇರಿ ಎನ್ನುವ ಸೀರಿಯಲ್ ಆರಂಭಗೊಳ್ಳುತ್ತಿದ್ದು, ಅದರಲ್ಲಿ ದೈವದ ಕಲೆಯನ್ನೇ ಮುಖ್ಯವಾಗಿ ತೋರಿಸಲಾಗಿದೆ. ಅದರ ಪ್ರೋಮೋ ಬರುತ್ತಲೇ ದೈವಾರಾಧಕರು ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಮತ್ತು ಪಾಂಡೇಶ್ವರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೈವಾರಾಧನೆ ಪ್ರದರ್ಶನ ಕಲೆಯಲ್ಲ, ಸಾತ್ವಿಕರ ನಂಬಿಕೆಯ ಆರಾಧನೆ. ದೈವಗಳ ವೇಷ ತೊಟ್ಟು ಕುಣಿಯುವುದು, ಛದ್ಮವೇಷದಂತೆ ತೋರಿಸುವುದು ತಪ್ಪು. ದೈವಗಳಿಗೆ ಕಟ್ಟುವುದು ನಿರ್ದಿಷ್ಟ ಜನಾಂಗದವರು ಮಾತ್ರ ಆಗಿದ್ದು, ಅದನ್ನು ಇತರರು ಪ್ರದರ್ಶನ ವಸ್ತುವಾಗಿ ತೋರಿಸುತ್ತಿದ್ದಾರೆ. ದೈವಗಳಿಗೆ ಕಟ್ಟುವುದಕ್ಕೆ ನಿರ್ದಿಷ್ಟ ಉದ್ದೇಶ, ಪಾಡ್ದನದ ಹಿನ್ನೆಲೆ ಇರುತ್ತದೆ. ಅದನ್ನು ಬಿದ್ದು ಕಾರಣಿಕ ಎಂದು ತೋರಿಸಲು ಛದ್ಮವೇಷದ ರೀತಿ ಮಾಡುತ್ತಿದ್ದಾರೆ. ಇದು ನಮ್ಮೆಲ್ಲರ ನಂಬಿಕೆಗೆ ಘಾಸಿ ಮಾಡಿದೆ. ಅಪಮಾನ ಮಾಡಿದಂತಾಗಿದೆ ಎಂದು ದೈವಾರಾಧಕರು ಆಕ್ಷೇಪ ಎತ್ತಿದ್ದಾರೆ.

ಕನ್ನಡ ವಾಹಿನಿಯಲ್ಲಿ ಮಂಗಳೂರಿನ ಪ್ರಶಾಂತ್ ಸಿಕೆ ಎಂಬವರು ದೈವದ ವೇಷ ತೊಟ್ಟು ಪಾತ್ರ ಮಾಡಿದ್ದಲ್ಲದೆ, ತನ್ನದೇ ನಿರ್ದೇಶನದಲ್ಲಿ ಸೀರಿಯಲ್ ಮಾಡುತ್ತಿದ್ದಾರೆ. ಕಾವೇರಿ ಸೀರಿಯಲ್ ಪ್ರಸಾರ ಮಾಡಬಾರದು, ಚಾನೆಲ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತುಳುನಾಡ ದೈವಾರಾಧನೆ ಸಂರಕ್ಷಣಾ ಸಂಸ್ಥೆ ಹೆಸರಲ್ಲಿ ಪೊಲೀಸ್ ದೂರು ನೀಡಲಾಗಿದೆ. ಈ ರೀತಿಯ ಅವಹೇಳನ ನಿಲ್ಲಿಸದೇ ಇದ್ದರೆ, ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ದೈವಾರಾಧಕರು ಎಚ್ಚರಿಸಿದ್ದಾರೆ.
Daiva aradhakas team in Mangalore demand to stop new kannada serial Kaveri which is about Daiva to start in Star suvarna, case filed. C k prashanth has done the role of Daiva which now has been objected.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm