Mangalore St Gerosa English school, Jeppu, MLA Bharath Shetty; ಹಿಂದೂ ಭಾವನೆಗಳಿಗೆ ಧಕ್ಕೆ, ಕ್ರಿಶ್ಚಿಯನ್ ಮಿಷನರಿ ಶಾಲೆ ತ್ಯಜಿಸಲು ಸಕಾಲ ; ಶಾಸಕ ಭರತ್ ಶೆಟ್ಟಿ 

11-02-24 02:06 pm       Mangaluru Correspondent   ಕರಾವಳಿ

ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ  ಕ್ರಮ ಜರುಗಿಸದೇ ಇದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

ಮಂಗಳೂರು, ಫೆ.11: ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂಗಳ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ಧ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ  ಷಡ್ಯಂತ್ರ ಸಹಿಸಲು ಅಸಾಧ್ಯ. ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ  ಕ್ರಮ ಜರುಗಿಸದೇ ಇದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

ನಗರದ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ಧ ವಿದ್ಯಾರ್ಥಿಗಳ ಮುಂದೆ ಆಡಿದ್ದಾರೆ ಎನ್ನಲಾದ ಹಿಂದೂ  ಭಾವನೆಗೆ ಧಕ್ಕೆ ತರುವ  ಮಾತುಗಳನ್ನು ಶಾಸಕರು‌ ಖಂಡಿಸಿದ್ದಾರೆ. ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ, ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲೆ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ  ಒಮ್ಮತದ ಅಭಿಪ್ರಾಯ ಮೂಡಬೇಕಿದೆ. ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯುವ ಕೃತ್ಯ ನಡೆದಿತ್ತು. ಇದೀಗ ರಾಮನ ಕುರಿತಂತೆ ನಿಂದನೆ ಮಾಡಿರುವುದು ಸಹಿಸಲು ಅಸಾಧ್ಯ. ಇದರ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರ ವರೆಗೆ ಡೋಂಗಿ ಜಾತ್ಯಾತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಈಗ ರಾಮನ ಅವಹೇಳನದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಮೌನ ವಹಿಸಿದ್ದು ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

Read; ಕ್ರೈಸ್ತ ಶಾಲಾ ಶಿಕ್ಷಕಿಯಿಂದ ಹಿಂದು ದೇವರ ನಿಂದನೆ ಆರೋಪ ; ಪೋಷಕರ ಆಡಿಯೋ ವೈರಲ್, ಶಾಲೆಗೆ ಮುತ್ತಿಗೆ ಹಾಕಿದ ಹಿಂದು ಸಂಘಟನೆ ಕಾರ್ಯಕರ್ತರು

Mangalore jeppu St Gerosa English school controversy, MLA Bharath Shetty demands suspension of Teacher. Mangalore North MLA Dr. Bharat Shetty has warned that if the management board does not take action against the concerned school teacher, fierce struggle is inevitable. Hindu outfits and parents gherao school after Catholic teacher talks wrong about Hindu God Ram.